Webdunia - Bharat's app for daily news and videos

Install App

Basanagouda Patil Yatnal: ಆರ್ ವರ್ಷಕ್ಕೆ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

Basanagowda Patil Yatnal
Krishnaveni K
ಬುಧವಾರ, 26 ಮಾರ್ಚ್ 2025 (17:32 IST)
ಬೆಂಗಳೂರು: ಬಿವೈ ವಿಜಯೇಂದ್ರ ವಿರುದ್ಧ ಕಿಡಿ ಕಾರುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಆರು ವರ್ಷಕ್ಕೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಆದೇಶ ಹೊರಡಿಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸೆಡ್ಡು ಹೊಡೆದಿದ್ದ ಯತ್ನಾಳ್ ಸದಾ ಬಹಿರಂಗ ಹೇಳಿಕೆಗಳ ಮೂಲಕ ಪಕ್ಷಕ್ಕೆ ಮುಜುಗುರವುಂಟು ಮಾಡುತ್ತಿದ್ದರು. ಈಗಾಗಲೇ ಹಲವು ಬಾರಿ ಹೈಕಮಾಂಡ್ ಯತ್ನಾಳ್ ಗೆ ಎಚ್ಚರಿಕೆ ನೀಡಿತ್ತು.

ಹಾಗಿದ್ದರೂ ಪಕ್ಷದಲ್ಲಿನ ಗುಂಪುಗಾರಿಕೆ ಮುಂದುವರಿದಿತ್ತು. ಯತ್ನಾಳ್ ಬಣ ಪದೇ ಪದೇ ಪ್ರತ್ಯೇಕ ಸಭೆ ಮಾಡುವ ಬಗ್ಗೆ ಎಷ್ಟೇ ಎಚ್ಚರಿಕೆ ನೀಡಿದರೂ ಕ್ಯಾರೇ ಎನ್ನುತ್ತಿರಲಿಲ್ಲ. ಇದೀಗ ಕಟ್ಟಾ ಹಿಂದುತ್ವ ನಾಯಕ ಯತ್ನಾಳ್ ರನ್ನು ಪಕ್ಷದಿಂದಲೇ ಉಚ್ಛಾಟಿಸಲಾಗಿದೆ.

ಇದೀಗ ಯತ್ನಾಳ್ ಮತ್ತು ಬಣದ ಮುಂದಿನ ನಡೆಯೇನು ಎಂಬ ಬಗ್ಗೆ ಎಲ್ಲರ ಕುತೂಹಲವಿದೆ. ಈಗಾಗಲೇ ಹಿರಿಯ ನಾಯಕ ಕೆಎಸ್ ಈಶ್ವರಪ್ಪನವರನ್ನೂ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಈಗ ಯಡಿಯೂರಪ್ಪ ಬಣದ ವಿರುದ್ಧ ಕಿಡಿ ಕಾರಿದ ಯತ್ನಾಳ್ ರನ್ನೂ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments