Webdunia - Bharat's app for daily news and videos

Install App

ವಕ್ಫ್ ಆಸ್ತಿ ಹೊಡೆದ ಕಾಂಗ್ರೆಸ್ ನಾಯಕರು ಯಾರು ಎಂದು ಲಿಸ್ಟ್ ಕೊಟ್ಟ ಬಸನಗೌಡ ಪಾಟೀಲ್ ಯತ್ನಾಳ್

Krishnaveni K
ಬುಧವಾರ, 16 ಅಕ್ಟೋಬರ್ 2024 (10:52 IST)
ವಿಜಯಪುರ: ವಕ್ಫ್ ಆಸ್ತಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಕ್ಫ್ ಆಸ್ತಿ ಹೊಡೆದವರು ಯಾರು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಲಿಸ್ಟ್ ಕೊಟ್ಟರು.

ವಿಜಯಪುರದಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಬಸನಗೌಡ ಯತ್ನಾಳ್ ಜೊತೆಗೆ ಸಿಟಿ ರವಿ ಮುಂತಾದ ಬಿಜೆಪಿ ನಾಯಕರೂ ಕೈ ಜೋಡಿಸಿದ್ದರು. ವಿಜಯಪುರದಲ್ಲಿ ವಕ್ಫ್ ಆಸ್ತಿ ಕಬಳಿಕೆ ಮಾಡಲು ಸರ್ವೇ ಮಾಡಲು ಸಚಿವ ಜಮೀರ್ ಅಹ್ಮದ್ ಆದೇಶ ನೀಡುತ್ತಿದ್ದರು. ಸುಮಾರು 10 ಸಾವಿರ ಎಕರೆ ಪ್ರದೇಶ ವಕ್ಫ್ ಆಸ್ತಿಗೆ ಸೇರ್ಪಡೆಗೊಳಿಸಲು ಆಸ್ತಿ ಮಾಲಿಕರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಬೃಹತ್ ಪ್ರತಿಭಟನೆ ನಡೆದಿದೆ.

ಈ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನ ಯಾವೆಲ್ಲಾ ನಾಯಕರು ವಕ್ಫ್ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಲಿಸ್ಟ್ ಕೊಟ್ಟರು. ಇದನ್ನ ನಾವು ಹೇಳಿದ್ದಲ್ಲ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಮನ್ನಿಪ್ಪಾಡಿ ಹೇಳಿರೋದು ಎಂದರು.

ಅನ್ವರ್ ಅವರು ಹೇಳಿರುವ ಪ್ರಕಾರ ಕರ್ನಾಟಕದಲ್ಲಿ ವಕ್ಫ್ ಆಸ್ತಿ 2 ಲಕ್ಷ 31 ಸಾವಿರ ಕೋಟಿ ಹಗರಣವಾಗಿದೆ ಎನ್ನುತ್ತಾರೆ. 20 ಸಾವಿರ ಎಕರೆ ಮುಸ್ಲಿಂ ನಾಯಕರೇ ಹೊಡೆದುಕೊಂಡಿದ್ದಾರೆ. ರೆಹಮಾನ್ ಖಾನ್, ಜಾಫರ್ ಶರೀಫ್, ಎನ್ ಎ ಹ್ಯಾರಿಸ್, ಕಮರುಲ್ ಇಸ್ಲಾಂ, ಖನೀಜಾ ಫಾತಿಮ್, ಸಿಎಂ ಇಬ್ರಾಹಿಂ, ಮಲ್ಲಿಕಾರ್ಜುನ ಖರ್ಗೆ ಸಹಿತ ಎಲ್ಲರೂ ವಕ್ಫ್ ಆಸ್ತಿ ಹೊಡೆದುಕೊಂಡವರು. ಇವರೆಲ್ಲಾ ಮುಸ್ಲಿಮರನ್ನು ಉದ್ದಾರ ಮಾಡ್ತೀನಿ ಎಂದು ಹೇಳುವವರು. ಆದರೆ ಅವರ ಹೆಸರಿನಲ್ಲಿ ವಕ್ಫ್ ಆಸ್ತಿ ಹೊಡೆದುಕೊಂಡಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments