Webdunia - Bharat's app for daily news and videos

Install App

ಬಿವೈ ವಿಜಯೇಂದ್ರ ಸಾವಿರಾರು ಕೋಟಿ ಹೊಡೆದಿದ್ದಾರೆ: ಗಂಭೀರ ಆರೋಪ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್

Krishnaveni K
ಶುಕ್ರವಾರ, 1 ನವೆಂಬರ್ 2024 (12:21 IST)
ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಸ್ಟಾರ್ ಪ್ರಚಾರಕ ಪಟ್ಟಿಯಿಂದ ತಮ್ಮನ್ನು ಕೈ ಬಿಟ್ಟಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೆಂಡಾಮಂಡಲರಾಗಿದ್ದು ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈಗ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಚುನಾವಣಾ ಆಯೋಗಕ್ಕೆ ನೀಡಿದೆ. ಈ ಪಟ್ಟಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹರಂತಹ ನಾಯಕರ ಹೆಸರುಗಳೇ ಇಲ್ಲ. ಇದರ ವಿರುದ್ಧ ಯತ್ನಾಳ್ ಈಗ ಕಿಡಿ ಕಾರಿದ್ದಾರೆ.

ನನಗೆ, ರಮೇಶ್ ಜಾರಕಿಹೊಳಿಯವರಿಗೆ ಬಿವೈ ವಿಜಯೇಂದ್ರ ಸ್ಟಾರ್ ಪ್ರಚಾರಕ ಪಟ್ಟ ನೀಡಬೇಕಾದ ಅವಶ್ಯಕತೆಯಿಲ್ಲ. ನಮ್ಮನ್ನು ಈಗಾಗಲೇ ಕರ್ನಾಟಕದ ಜನ ಒಪ್ಪಿಕೊಂಡಿದ್ದಾರೆ. ನಮಗೆ ಯಾರ ಬಿರುದೂ ಬೇಕಾಗಿಲ್ಲ. ವಿಜಯೇಂದ್ರಗೆ ಅವರ ಅಪ್ಪನ ಕಾಲದಲ್ಲಿ ಹೊಡೆದ ಸಾವಿರಾರು ಕೋಟಿ ರೂ. ದುಡ್ಡಿದೆ. ಅದನ್ನು ಖರ್ಚು ಮಾಡಲು ಪ್ರಚಾರ ಮಾಡ್ತಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

‘ಈಗೆಲ್ಲಾ ವಿಜಯೇಂದ್ರ ಭಾಷಣ ಕೇಳಲು ಯಾರೂ ಜನ ಸೇರಲ್ಲ. ಕರ್ನಾಟಕ ಬಿಜೆಪಿ ಎಂದು ಎಕ್ಸ್ ಪೇಜ್ ಇದೆಯಲ್ಲ. ಅಲ್ಲಿ ಎಲ್ಲಾ ಟ್ವೀಟ್ ಗಳೂ ಬರೀ ವಿಜಯೇಂದ್ರನನ್ನು ಹೊಗಳಿಯೇ ಬರೋದು. ಅದನ್ನು ಕರ್ನಾಟಕ ಬಿಜೆಪಿ ಎಂದಲ್ಲ, ವಿಜಯೇಂದ್ರ ಬಿಜೆಪಿ ಎಂದು ಹೆಸರು ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದಿದ್ದಾರೆ.

ಇನ್ನು ಉಪಚುನಾವಣೆಯಲ್ಲಿ ಹಿಂದೂಗಳ ವೋಟ್ ಬೇಕು ಅಂತಂದ್ರೆ ನಮ್ಮನ್ನು ಪ್ರಚಾರಕ್ಕೆ ಕರೆಯಲಿ. ಇಲ್ಲಾ.. ನಮಗೆ ಸಾಬ್ರ ವೋಟ್ ಸಾಕು ಅಂತಂದ್ರೆ ಅವರೇ ಪ್ರಚಾರ ಮಾಡ್ಕೊಳ್ಳಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments