ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

Sampriya
ಭಾನುವಾರ, 31 ಆಗಸ್ಟ್ 2025 (17:19 IST)
ಕಲಬುರಗಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದು, ಈ ವಿಚಾರವಾಗಿ ಅವರು ಬಿಜೆಪಿ ಜತೆ ಚರ್ಚೆ ಮಾಡಿದ್ದಾರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. 

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು  ಬಿಜೆಪಿ ಜತೆ ಸೇರಿ ಸರ್ಕಾರ ಮಾಡಲು ವಿಜಯೇಂದ್ರ ಜತೆ ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ. 60 ರಿಂದ 70 ಕಾಂಗ್ರೆಸ್ ಶಾಸಕರನ್ನ ಕರೆತಂದು ನಮಸ್ತೆ ಸದಾ ವತ್ಸಲೇ ಹಾಡ್ತೀವಿ ಅಂತಾ ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಆದರೆ ನಮ್ಮ ಆಂತರಿಕ ವರದಿಯಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲವಿಲ್ಲದ ಕಾರಣ ಸರ್ಕಾರ ಮಾಡಲು ಪ್ರಯತ್ನಿಸಿಲ್ಲ ಅಂತಾ ಬಿಜೆಪಿ ಹೈಕಮಾಂಡ್ ಹೇಳಿತ್ತು. 

ವಿಜಯೇಂದ್ರ ಹಾಗೂ ಡಿಕೆಶಿ ಇವರಿಬ್ಬರು ಕುಳಿತುಬಿಟ್ಟಿದ್ದರೆ ಕರ್ನಾಟಕವನ್ನ ಮಾರಾಟ ಮಾಡುತ್ತಿದ್ದರು. ಹೀಗಾಗಿ ಡಿಕೆಶಿ ಬೇಡ ಅಂತಾ ನಮ್ಮವರು ಅಂದಿದ್ರು ಎಂದು ಹೇಳಿದ್ದಾರೆ. 

ಡಿಕೆಶಿ ಪಾಪ ನಮಸ್ತೆ ಸದಾ ವತ್ಸಲ್ಯ ಅಂತಾ ಹೇಳಿದ್ರು ನಮಸ್ತೆ ಸೋನಿಯಾ ಮಾತೆ ಇಟ್ಲಿ ಕಾ ಪುತ್ರ ಅಂತಾ ಹಾಡಿದ್ರೆ, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ತೆಗೆದು ಸೋನಿಯಾ ಗಾಂಧಿ ಡಿಕೆಶಿಯನ್ನ ಸಿಎಂ ಮಾಡುತ್ತಿದ್ದರು. 

ಭಾರತ ಮಾತೆಗೆ ನಮಸ್ತೆ ಅಂದ್ರೆ ಇವರಿಗೆ ನೋವಾಗುತ್ತದೆ. ಇಟ್ಲಿ ಮಾತೆಗೆ ಒಂದು ಹಾಡು ಕಟ್ಟಿ ಹಾಡಬೇಕು. ಸೋನಿಯಾ ಮಾತೆ ಅಂತಾ ಹಾಡಿದ್ರೆ ಡಿಕೆಶಿ 24 ಗಂಟೆಯಲ್ಲಿ ಸಿಎಂ ಆಗುತ್ತಾರೆ ಎಂದು ಟಾಂಗ್ ಕೊಟ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments