ರಾಹುಲ್ ಗಾಂಧಿ ಅರೆಹುಚ್ಚ, ಜಿಲೇಬಿ ಫ್ಯಾಕ್ಟರಿ ಮಾಡ್ತಾನಂತ: ಬಸನಗೌಡ ಪಾಟೀಲ್ ಯತ್ನಾಳ್

Krishnaveni K
ಶುಕ್ರವಾರ, 8 ನವೆಂಬರ್ 2024 (16:31 IST)
ಶಿಗ್ಗಾಂವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಮತ್ತೊಮ್ಮೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯನ್ನು ಅರೆಹುಚ್ಚ ಎಂದಿದ್ದಾರೆ.

ಶಿಗ್ಗಾಂವಿಯಲ್ಲಿ ಇಂದು ಭರತ್ ಬೊಮ್ಮಾಯಿ ಪರ ಪ್ರಚಾರ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ‘ರಾಹುಲ್ ಗಾಂಧಿಯಂತಹ ಅರೆಹುಚ್ಚನ ಬಗ್ಗೆ ಏನು ಮಾತಾಡೋದು. ಜಿಲೇಬಿ ಕಾ ಫ್ಯಾಕ್ಟಿ ಬನೂಂಗಾ ಅಂತಾನೆ. ಏನು ಹೊಲದಾಗೆ ಬದನೆಕಾಯಿ ತೆಗೆದಾಂಗೆ ಅನ್ಕೊಂಡಾನಾ’ ಎಂದು ವ್ಯಂಗ್ಯ ಮಾಡಿದ್ದಾರೆ.

‘ಇದಕ್ಕೆ ಮೊದಲು ಆಲೂಗಡ್ಡೆಯಿಂದ ಚಿನ್ನ ತೆಗೀತೀನಿ ಅಂದಿದ್ದ. ಇಂತಹ ವ್ಯಕ್ತಿ ಹೋಗಿ ನಮ್ಮ ದೇಶ ಆಳುತ್ತಾನಂತೆ’ ಎಂದು ರಾಹುಲ್ ವಿರುದ್ಧ ಯತ್ನಾಳ್ ವ್ಯಂಗ್ಯ ಮಾಡಿದ್ದಾರೆ. ಈ ಹಿಂದೆಯೂ ಇದೇ ರೀತಿ ರಾಹುಲ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ ಯತ್ನಾಳ್  ವಿರುದ್ಧ ಕೇಸ್ ದಾಖಲಾಗಿತ್ತು.

ಇಂದು ತಮ್ಮ ವ್ಯಂಗ್ಯ  ಭರಿತ ಶೈಲಿಯಲ್ಲಿ ಮಾತನಾಡಿದ ಯತ್ನಾಳ್, ಸಿದ್ದರಾಮಯ್ಯಗೂ ಟಾಂಗ್ ಕೊಟ್ಟರು. 2000 ರೂ. ಫ್ರೀ ಕೊಡೋದು ಅಲ್ಲ. ದುಡಿದು ತಿನ್ನಲು ಮಾರ್ಗ ತೋರಿಸಬೇಕು ಎಂದರು. ಅಲ್ಲದೆ, ಉಚಿತ ಬಸ್ ಗ್ಯಾರಂಟಿ ನಿಲ್ಲಿಸುವ ಘೋಷಣೆ ಮಾಡಿದ್ದ ಡಿಕೆ ಶಿವಕುಮಾರ್ ಹೇಳಿಕೆ ಪ್ರಸ್ತಾಪಿಸಿದ ಯತ್ನಾಳ್, ದುಡ್ಡಿದ್ದಷ್ಟೇ ಫ್ರೀ ಕೊಡಬೇಕು. ಇಲ್ಲಾಂದ್ರೆ  ಹೀಗೇ ಆಗೋದು ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments