Webdunia - Bharat's app for daily news and videos

Install App

ಬೇರೆ ಪಕ್ಷ ಕಟ್ಟಲ್ಲ, ಬಿಜೆಪಿಯನ್ನೇ ರಿಪೇರಿ ಮಾಡ್ತೀನಿ: ಬಸನಗೌಡ ಯತ್ನಾಳ್ ಶಪಥ

Krishnaveni K
ಶನಿವಾರ, 29 ಮಾರ್ಚ್ 2025 (12:27 IST)
ಬೆಂಗಳೂರು: ಪಕ್ಷದಿಂದ ಉಚ್ಛಾಟನೆಯಾದ ಬಳಿಕ ಒಂದು ದಿನ ಸೈಲೆಂಟ್ ಆಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಬೇರೆ ಪಕ್ಷ ಕಟ್ಟಲ್ಲ, ಬಿಜೆಪಿಯನ್ನೇ ರಿಪೇರಿ ಮಾಡ್ತೀನಿ ಎಂದು ಶಪಥ ಮಾಡಿದ್ದಾರೆ.

ಮೊನ್ನೆಯಷ್ಟೇ ಬಿಜೆಪಿ ಶಿಸ್ತು ಸಮಿತಿ ಯತ್ನಾಳ್ ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ನೋಟಿಸ್ ನೀಡಿತ್ತು. ಇದರ ಬೆನ್ನಲ್ಲೇ ಅವರು ಸೈಲೆಂಟ್ ಆಗಿದ್ದರು. ಮಾಧ್ಯಮಗಳ ಮುಂದೆ ಬರದೇ ಸೋಷಿಯಲ್ ಮೀಡಿಯಾದಲ್ಲಿ ಹರಿಹಾಯ್ದಿದ್ದರು.

ಇದರ ನಡುವೆ ಅವರು ತಮ್ಮ ಬೆಂಬಲಿಗ ನಾಯಕರೊಂದಿಗೆ ಸಭೆ ನಡೆಸಿದ್ದು ಬೇರೆ ಪಕ್ಷ ಕಟ್ಟದೇ ಇರಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು ಮತ್ತೆ ಯಡಿಯೂರಪ್ಪ ಮತ್ತು ಮಕ್ಕಳಿಗೆ ಟಾಂಗ್ ನೀಡಿದ್ದಾರೆ.

‘ಬಿಜೆಪಿ ನನ್ನ ಮಾತೃ ಸಮಾನ. ಕೆಜೆಪಿಯಂತೆ ಬೇರೆ ಪಕ್ಷ ಕಟ್ಟಿ, ಬಿಜೆಪಿ ಹಾಳು ಮಾಡಿದಂತೆ, ನಾನು ಬಿಜೆಪಿ ಹಾಳು ಮಾಡಲು ಅವಕಾಶ ಕೊಡಲ್ಲ. ಹೊಸ ಪಕ್ಷ ಕಟ್ಟಲ್ಲ. ನನ್ನನ್ನು ಪಕ್ಷಕ್ಕೆ ಕರೆಸಿ ಎಂದು ಬೇಡಿಕೊಳ್ಳಲ್ಲ. ಹೋರಾಟ ಮಾಡಿ ಬಿಜೆಪಿಯನ್ನು ರಿಪೇರಿ ಮಾಡುತ್ತೇನೆ’ ಎಂದು ಯತ್ನಾಳ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments