Webdunia - Bharat's app for daily news and videos

Install App

ಅಡ್ಜಸ್ಟ್ ಮೆಂಟ್ ರಾಜಕಾರಣಕ್ಕೆ ಬಲಿಯಾದೆ: ಉಚ್ಛಾಟನೆ ಬಳಿಕ ಯತ್ನಾಳ್ ಮೊದಲ ಸಂದೇಶದಲ್ಲಿ ಏನಿದೆ ನೋಡಿ

Krishnaveni K
ಗುರುವಾರ, 27 ಮಾರ್ಚ್ 2025 (12:12 IST)
Photo Credit: Facebook
ಬೆಂಗಳೂರು: ಬಿಜೆಪಿಯಿಂದ ಆರು ವರ್ಷಗಳಿಗೆ ಉಚ್ಛಾಟನೆಯಾದ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋಷಿಯಲ್ ಮೀಡಿಯಾದಲ್ಲಿ ಸಂದೇಶವೊಂದನ್ನು ಬರೆದಿದ್ದು ಅಡ್ಜಸ್ಟ್ ಮೆಂಟ್ ರಾಜಕಾರಣಕ್ಕೆ ಬಲಿಯಾದೆ ಎಂದಿದ್ದಾರೆ. ಅವರ ಸಂದೇಶದ ವಿವರ ಇಲ್ಲಿದೆ ನೋಡಿ.

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ.
ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ  ಪಕ್ಷದ  ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ 'ಅಡ್ಜಸ್ಟ್ಮೆಂಟ್ ರಾಜಕಾರಣದಿಂದ' ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ  ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ  ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ.
ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ.  ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ 'ಅಪಥ್ಯ' ವಾಗಿದೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments