Webdunia - Bharat's app for daily news and videos

Install App

ಬಿಜೆಪಿ ಉಸ್ತುವಾರಿಗಳ ವಿರುದ್ಧವೇ ಆರೋಪ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್

Krishnaveni K
ಸೋಮವಾರ, 9 ಡಿಸೆಂಬರ್ 2024 (10:28 IST)
ಬೆಂಗಳೂರು: ಇತ್ತೀಚೆಗೆ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಬಣ ಬಡಿದಾಟ ಜೋರಾಗಿದೆ. ಇದರ ನಡುವೆ ಯತ್ನಾಳ್ ಬಿಜೆಪಿ ಉಸ್ತುವಾರಿ ವಿರುದ್ಧವೇ ಆರೋಪ ಮಾಡಿದ್ದಾರೆ.

ರಾಜ್ಯ ಬಿಜೆಪಿಯ ಬಣ ಜಗಳ ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ವಿಜಯೇಂದ್ರ ವಿರುದ್ಧ ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದ ಯತ್ನಾಳ್ ಬಹಿರಂಗವಾಗಿಯೇ ಕಿಡಿ ಕಾರುತ್ತಿದ್ದರು. ಅತ್ತ ವಿಜಯೇಂದ್ರ ಬಣದವರೂ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಈ ನಡುವೆ ದೆಹಲಿಗೆ ತೆರಳಿದ್ದ ವಿಜಯೇಂದ್ರ ಪಕ್ಷದ ಹಿರಿಯರಿಗೆ ಯತ್ನಾಳ್ ವಿರುದ್ದ ದೂರು ನೀಡಿದ್ದರು.

ಹೀಗಾಗಿ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಅದರಂತೆ ದೆಹಲಿಗೆ ಹೋದ ಯತ್ನಾಳ್ ಆಂಡ್ ಟೀಂ ತಮ್ಮ ಅಸಮಾಧಾನಗಳನ್ನು ತೋಡಿಕೊಂಡಿದ್ದರು. ಇದರ ನಡುವೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು ಇಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್, ಸದ್ಯಕ್ಕೆ ರಾಜ್ಯಧ್ಯಕ್ಷ ಬದಲಾವಣೆಯಿಲ್ಲ. ವಿಜಯೇಂದ್ರರೇ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಎಂದಿದ್ದರು.

ಇದು ಯತ್ನಾಳ್ ಅಸಮಾಧಾನಕ್ಕೆ ಕಾರಣವಾಗಿದೆ. ರಾಧಾ ಮೋಹನ್ ದಾಸ್ ವಿರುದ್ಧವೇ ಆರೋಪ ಮಾಡಿರುವ ಯತ್ನಾಳ್, ಅವರು ವಿಜಯೇಂದ್ರ ಪರ ಇದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಆದರೆ ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಒಗ್ಗಟ್ಟಾಗಿಯೇ ಹೋರಾಟ ನಡೆಸಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments