Webdunia - Bharat's app for daily news and videos

Install App

ಹೈಕಮಾಂಡ್ ನೋಟಿಸ್ ಗೆ ಉತ್ತರಿಸದೇ ಸಮಯ ಕೇಳಿದ ಬಸನಗೌಡ ಪಾಟೀಲ್ ಯತ್ನಾಳ್ ಲೆಕ್ಕಾಚಾರವೇನು

Krishnaveni K
ಶನಿವಾರ, 15 ಫೆಬ್ರವರಿ 2025 (11:20 IST)
ಬೆಂಗಳೂರು: ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಉತ್ತರ ನೀಡಿರಲಿಲ್ಲ. ಅದರ ಬದಲು ಅವರು ಸಮಯಾವಕಾಶ ಕೇಳಿದ್ದು ಇದರ ಹಿಂದಿನ ಲೆಕ್ಕಾಚಾರವೇನು ನೋಡಿ.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ತಮ್ಮದೇ ಕೆಲವು ಬೆಂಬಲಿಗ ಶಾಸಕರ ಗುಂಪು ಕಟ್ಟಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಹೇಳಿಕೆ ಕೊಡುತ್ತಾ ಪಕ್ಷಕ್ಕೆ ಮುಜುಗರವುಂಟು ಮಾಡುತ್ತಿದ್ದಾರೆ.

ಇದೇ ಕಾರಣಕ್ಕೆ ಹೈಕಮಾಂಡ್ ಎರಡನೇ ಬಾರಿಗೆ ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್ ಕೊಟ್ಟಿತ್ತು. ಆದರೆ ಇದುವರೆಗೆ ಅವರು ನೋಟಿಸ್ ಗೆ ಉತ್ತರ ಕೊಟ್ಟಿರಲಿಲ್ಲ. ಹೀಗಾಗಿ ಹೈಕಮಾಂಡ್ ತಾನಾಗಿಯೇ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು. ಇದರ ನಡುವೆ ಅವರು ಕೊನೆಯ ಕ್ಷಣದಲ್ಲಿ ಸಮಯಾವಕಾಶ ಕೇಳಿದ್ದಾರೆ ಎಂದು ವರದಿಯಾಗಿದೆ.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಜೊತೆ ಯತ್ನಾಳ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಮಾತುಕತೆಯ ಪರಿಣಾಮ ನೋಡಿಕೊಂಡು ಅವರು ಮುಂದಿನ ಹೆಜ್ಜೆಯಿಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments