Webdunia - Bharat's app for daily news and videos

Install App

ಹಿಂದೂ ದೇವಾಲಯಗಳಿಗೆ ಭೇಟಿ ಕೊಡೋದು, ಅಧಿಕಾರ ಸಿಕ್ಕಾಗ ಸಾಬ್ರರ ಅಭಿವೃದ್ಧಿ ಮಾಡೋದು: ಬಸನಗೌಡ ಯತ್ನಾಳ್

Krishnaveni K
ಶನಿವಾರ, 28 ಸೆಪ್ಟಂಬರ್ 2024 (09:50 IST)
ಬೆಂಗಳೂರು: ಅಧಿಕಾರ ಹಿಡಿಯಲು ಹಿಂದೂ ದೇವಾಲಯಗಳಿಗೆ ಭೇಟಿ ಕೊಡೋದು, ಅಧಿಕಾರ ಸಿಕ್ಕಾಗ ಸಾಬ್ರರ ಅಭಿವೃದ್ಧಿ ಮಾಡೋದು ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ಸಲ ಗಣೇಶ ಹಬ್ಬಕ್ಕೆ ಗಣೇಶ ಕೂರಿಸಲು ಪರ್ಮಿಷನ್ ಬೇಡ. ಯಾಕೆಂದರೆ ಮುಂದಿನ ಸಲ ನಾವೇ ಅಧಿಕಾರದಲ್ಲಿರ್ತೇವೆ. ನಾವು ಅಧಿಕಾರಕ್ಕೆ ಬಂದ ಮೇಲೆ ಗಣೇಶ ಹಬ್ಬಕ್ಕೆ ಫುಲ್ ಸೆಕ್ಯುರಿಟಿ ಕೊಡ್ತೇವೆ. ಅವರ ಕೆಲಸ ಮಸೀದಿಯಿಂದ ಕಲ್ಲು ತೂರಾಟವಾಗದಂತೆ ನೋಡಿಕೊಳ್ಳೋದು ಅಷ್ಟೇ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೆಳಿದ್ದಾರೆ.

ನಾನೇನಾದರೂ ಮುಖ್ಯಮಂತ್ರಿಯಾದರೆ ಪೊಲೀಸರಿಗೆ ಎಕೆ47 ಗನ್ ಕೊಡ್ತೇನೆ. ಯಾರದ್ರೂ ಪಾಕಿಸ್ತಾನ್ ಜಿಂದಾಬಾದ್ ಎನ್ನಬೇಕು. ಅಲ್ಲಿಗೇ ಅವರ ಕತೆ ಮುಗಿಯುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಎನ್ನುವವರು ಅಲ್ಲಿಗೇ ಹೋಗಲಿ ಎಂದು ಯತ್ನಾಳ್ ಖಡಕ್ ಆಗಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ, ಇಲ್ಲಿ ನಾವು ಇರ್ತೇವೆ ಎಂದು ಗುಡುಗಿದ್ದಾರೆ.

ಇನ್ನು, ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಯತ್ನಾಳ್, ಸಿದ್ದರಾಮಯ್ಯನವರು ಹಿಂದೂ ದೇವಾಲಯಗಳಿಗೆ ಹೋದರೆ ಕುಂಕುಮ ಇಟ್ಟುಕೊಳ್ಳಲೂ ಹಿಂದು ಮುಂದೆ ನೋಡುತ್ತಾರೆ. ಅದೇ ಸಾಬ್ರರ ಅಭಿವೃದ್ಧಿಗೆ 10 ಸಾವಿರ ಕೋಟಿ ಮೀಸಲಿಡುತ್ತೇನೆ ಅಂತಾರೆ. ನಾವು ಹಿಂದೂಗಳೆಲ್ಲಾ ಒಗ್ಗಟ್ಟಾಗಬೇಕು ಎಂದು ಯತ್ನಾಳ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments