Webdunia - Bharat's app for daily news and videos

Install App

ಬಸವಣ್ಣನವರು ಜನಿವಾರ ನಿರಾಕರಿಸಿದ್ದು ನಿಜ: ಸಿದ್ದಗಂಗಾಶ್ರೀ

Webdunia
ಶುಕ್ರವಾರ, 3 ಜೂನ್ 2022 (17:08 IST)

ಜನಿವಾರ ದೀಕ್ಷೆಯನ್ನು ಬಸವಣ್ಣನವರು ನಿರಾಕರಿಸಿ, ಹೊರಗೆ ಬಂದಿದ್ದು ಸತ್ಯ. ವಾಸ್ತವ ವಿಚಾರವನ್ನು ಇಂದಿನ ಮಕ್ಕಳಿಗೆ ತಿಳಿಸುವ ದೃಷ್ಟಿಯಿಂದ ಪ್ರಕಟಗೊಳಿಸುವುದು ಒಳ್ಳೆಯದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ವಚನಗಳನ್ನು ತಿದ್ದುವುದಕ್ಕೆ ಯಾರಿಂದಲು ಸಾಧ್ಯವಿಲ್ಲ. ಅದನ್ನು ಏನಾದರು ತಿದ್ದಿದರೆ ಅವರಿಗೆ ಅಪಚಾರ ಮಾಡಿದಂತಾಗುತ್ತದೆ. ಬಸವಣ್ಣನವರು ಏನು ಹೇಳಿದ್ದಾರೋ ವಾಸ್ತವ ವಿಚಾರ ಪ್ರಕಟವಾಗಬೇಕು ಎಂದರು.

ಸಮಾಜಕ್ಕೆ ಬಸವಣ್ಣನವರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅಂದಿನಿಂದ ಇಂದಿನವರೆಗೂ ಸಾಮಾಜಿಕವಾಗಿ ಆರ್ಥಿಕವಾಗಿ ಬಹುದೊಡ್ಡ ಕೊಡುಗೆಯನ್ನು ಸಮಾಜಕ್ಕೆ ನೀಡುತ್ತಲೇ ಬಂದಿದ್ದಾರೆ. ಒಬ್ಬರಿಗೆ ಇಬ್ಬರಿಗೆ ಅಲ್ಲ, ಬದಲಿಗೆ ಎಲ್ಲರಿಗೂ ಬೇಕಾದ ವಿಚಾರಗಳನ್ನು ಬಸವಣ್ಣ ನೀಡಿದ್ದಾರೆ. ಅವರ ವಚನಗಳೇ ನಮಗೆ ಆಧಾರ. ಅವುಗಳನ್ನು ತಿದ್ದದೇ ಹೇಗಿದೆಯೋ ಹಾಗೆ ಕೊಡಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಜನಿವಾರ ದೀಕ್ಷೆಯನ್ನು ಬಸವಣ್ಣನವರು ನಿರಾಕರಿಸಿ, ಹೊರಗೆ ಬಂದಿದ್ದು ಸತ್ಯ. ವಾಸ್ತವ ವಿಚಾರವನ್ನು ಇಂದಿನ ಮಕ್ಕಳಿಗೆ ತಿಳಿಸುವ ದೃಷ್ಠಿಯಿಂದ ಪ್ರಕಟಗೊಳಿಸುವುದು ಒಳ್ಳೆಯದು. ಮುಖ್ಯಮಂತ್ರಿಗಳು ಹೇಳಿದ್ದಾರೆ, ಶಿಕ್ಷಣ ಸಚಿವರು ವರದಿ ಕೊಟ್ಟ ನಂತರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ವೀರಶೈವ ಪಂಥ ಸ್ಥಾಪನೆ ಬಸವ ಧರ್ಮ ವಿಚಾರವಾಗಿ ಗೊಂದಲ

ಸಂಬಂಧಿಸಿದ ಸುದ್ದಿ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments