Webdunia - Bharat's app for daily news and videos

Install App

ಈ ಬಾರಿ ಬಿಜೆಪಿ ಪ್ರಚಾರಕ್ಕೆ ಕಿಚ್ಚ ಸುದೀಪ್ ಬರುವ ಬಗ್ಗೆ ಬಸವರಾಜ ಬೊಮ್ಮಾಯಿ ಹೇಳಿಕೆ

Krishnaveni K
ಮಂಗಳವಾರ, 26 ಮಾರ್ಚ್ 2024 (13:26 IST)
Photo Courtesy: Twitter
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಕ್ಕೆ ಕಿಚ್ಚ ಸುದೀಪ್ ಬರ್ತಾರಾ ಎಂಬ ಪ್ರಶ್ನೆಗೆ ಮಾಜಿ ಸಿಎಂ, ಹಾವೇರಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಬಸವರಾಜ ಬೊಮ್ಮಾಯಿ ಮೇಲೆ ಕಿಚ್ಚನಿಗೆ ವಿಶೇಷ ಗೌರವವಿದೆ. ಅವರನ್ನು ಮಾಮ ಎಂದೇ ಕರೆಯುತ್ತಾರೆ. ಇದೇ ಅಭಿಮಾನದಿಂದ ಕಿಚ್ಚ ಬಿಜೆಪಿ ಪರ ಪ್ರಚಾರಕ್ಕೆ ಬಂದಿದ್ದರು.

ಇದೀಗ ಲೋಕಸಭೆ ಚುನಾವಣೆ ವೇಳೆ ಬೊಮ್ಮಾಯಿ ಪರ ಹಾವೇರಿಯಲ್ಲಿ ಕಿಚ್ಚ ಪ್ರಚಾರ ಮಾಡಲಿದ್ದಾರಾ ಎಂದು ಪ್ರಶ್ನೆ ಕೇಳಿದಾಗ  ಅವರು ‘ಇದನ್ನು ನಮ್ಮ ನಾಯಕರು ನಿರ್ಧರಿಸುತ್ತಾರೆ’ ಎಂದಿದ್ದಾರೆ. ಆದರೆ ಕೆಲವು ಸೆಲೆಬ್ರಿಟಿಗಳು ಪ್ರಚಾರಕ್ಕೆ ಬರಲಿದ್ದಾರೆ’ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಇದಕ್ಕೆ ಮೊದಲು ಸುದೀಪ್ ರನ್ನು ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋಗುತ್ತೀರಾ ಎಂದು ಕೇಳಿದಾಗ ಯಾವುದೇ ಪಕ್ಷದವರೂ ನನ್ನನ್ನು ಇದುವರೆಗೆ ಕರೆದಿಲ್ಲ. ಕರೆದಾಗ ನೋಡೋಣ ಎಂದಿದ್ದರು. ಸದ್ಯಕ್ಕೆ ಸುದೀಪ್ ಮ್ಯಾಕ್ಸ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಈ ಬಾರಿ ಅವರು ಪ್ರಚಾರಕ್ಕೆ ಬರುತ್ತಾರಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments