Webdunia - Bharat's app for daily news and videos

Install App

ಈ ಬಾರಿ ಬಿಜೆಪಿ ಪ್ರಚಾರಕ್ಕೆ ಕಿಚ್ಚ ಸುದೀಪ್ ಬರುವ ಬಗ್ಗೆ ಬಸವರಾಜ ಬೊಮ್ಮಾಯಿ ಹೇಳಿಕೆ

Krishnaveni K
ಮಂಗಳವಾರ, 26 ಮಾರ್ಚ್ 2024 (13:26 IST)
Photo Courtesy: Twitter
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಕ್ಕೆ ಕಿಚ್ಚ ಸುದೀಪ್ ಬರ್ತಾರಾ ಎಂಬ ಪ್ರಶ್ನೆಗೆ ಮಾಜಿ ಸಿಎಂ, ಹಾವೇರಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಬಸವರಾಜ ಬೊಮ್ಮಾಯಿ ಮೇಲೆ ಕಿಚ್ಚನಿಗೆ ವಿಶೇಷ ಗೌರವವಿದೆ. ಅವರನ್ನು ಮಾಮ ಎಂದೇ ಕರೆಯುತ್ತಾರೆ. ಇದೇ ಅಭಿಮಾನದಿಂದ ಕಿಚ್ಚ ಬಿಜೆಪಿ ಪರ ಪ್ರಚಾರಕ್ಕೆ ಬಂದಿದ್ದರು.

ಇದೀಗ ಲೋಕಸಭೆ ಚುನಾವಣೆ ವೇಳೆ ಬೊಮ್ಮಾಯಿ ಪರ ಹಾವೇರಿಯಲ್ಲಿ ಕಿಚ್ಚ ಪ್ರಚಾರ ಮಾಡಲಿದ್ದಾರಾ ಎಂದು ಪ್ರಶ್ನೆ ಕೇಳಿದಾಗ  ಅವರು ‘ಇದನ್ನು ನಮ್ಮ ನಾಯಕರು ನಿರ್ಧರಿಸುತ್ತಾರೆ’ ಎಂದಿದ್ದಾರೆ. ಆದರೆ ಕೆಲವು ಸೆಲೆಬ್ರಿಟಿಗಳು ಪ್ರಚಾರಕ್ಕೆ ಬರಲಿದ್ದಾರೆ’ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಇದಕ್ಕೆ ಮೊದಲು ಸುದೀಪ್ ರನ್ನು ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋಗುತ್ತೀರಾ ಎಂದು ಕೇಳಿದಾಗ ಯಾವುದೇ ಪಕ್ಷದವರೂ ನನ್ನನ್ನು ಇದುವರೆಗೆ ಕರೆದಿಲ್ಲ. ಕರೆದಾಗ ನೋಡೋಣ ಎಂದಿದ್ದರು. ಸದ್ಯಕ್ಕೆ ಸುದೀಪ್ ಮ್ಯಾಕ್ಸ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಈ ಬಾರಿ ಅವರು ಪ್ರಚಾರಕ್ಕೆ ಬರುತ್ತಾರಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments