ಮುಸ್ಲಿಂ ಕೋಟಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Krishnaveni K
ಶನಿವಾರ, 27 ಏಪ್ರಿಲ್ 2024 (11:38 IST)
ಬೆಂಗಳೂರು: ಮುಸ್ಲಿಮರಿಗೆ ಹಿಂದುಳಿದ ವರ್ಗದ ಸ್ಥಾನ ಮಾನ ನೀಡುವ ವಿಚಾರ ಸದ್ಯಕ್ಕೆ ಸುಪ್ರೀಂಕೋರ್ಟ್ ನಲ್ಲಿದೆ. ಹಾಗಿದ್ದರೂ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರಿಗೆ ಹಿಂದುಳಿದ ವರ್ಗದ ಸ್ಥಾನಮಾನ ನೀಡಿದ ವಿಚಾರವಾಗಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಧರ್ಮದ ಆಧಾರದಲ್ಲಿ ಯಾರಿಗೂ ಹಿಂದುಳಿದ ಸ್ಥಾನ ಮಾನ ನೀಡಬಾರದು ಎಂದು ಕೋರ್ಟ್ ಸರ್ಕಾರಕ್ಕೆ ಛಾಟಿ ಬೀಸಿತ್ತು.

ಇದರ ಬಗ್ಗೆ ಮಾಧ‍್ಯಮಗಳು ಪ್ರಶ್ನಿಸಿದಾಗ ಈ ನಿರ್ಧಾರ ಬೊಮ್ಮಾಯಿ ಸರ್ಕಾರದ ಅವಧಿಯಲ್ಲೇ ನಡೆದಿತ್ತು ಎಂದು ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದರು. ಇದಕ್ಕೀಗ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ವಿಚಾರ ಈಗಲೂ ಸುಪ್ರೀಂ ಕೋರ್ಟ್ ನಲ್ಲಿದೆ. ಇದರ ಬಗ್ಗೆ ತೀರ್ಪು ಬರುವವರೆಗೆ ನಾವು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ನಿರ್ಧರಿಸಿದ್ದೆವು.

ವಿವಾದ ಇತ್ಯರ್ಥವಾಗುವವರೆಗೂ ಮುಸ್ಲಿಂ ಕೋಟಾವನ್ನು ರದ್ದುಗೊಳಿಸುವ ಅಥವಾ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದು ಬೇಡ ಎಂದು ನಿರ್ಧರಿಸಿದ್ದೆವು. ನಮ್ಮ ನಿಲುವು ಅದಕ್ಕೆ ಬದ್ಧವಾಗಿಯೇ ಇದೆ. ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ನಮ್ಮ ನಿರ್ಧಾರವನ್ನು ವಿರೋಧಿಸಿತ್ತು ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments