Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣ ಹೆಂಗ್ರೀ ಕೊಟ್ರೀ: ಬಸವರಾಜ ಬೊಮ್ಮಾಯಿ ಸಿಟ್ಟಾಗಿದ್ದು ಯಾಕೆ

Krishnaveni K
ಬುಧವಾರ, 13 ನವೆಂಬರ್ 2024 (12:43 IST)
ಬೆಂಗಳೂರು: ಕರ್ನಾಟಕದಲ್ಲಿ ಉಪಚುನಾವಣೆ ಹೊಸ್ತಿಲಲ್ಲೇ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿರುವ ಬಗ್ಗೆ ಸಂಸದ, ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ತಂದೆ ಬಸವರಾಜ ಬೊಮ್ಮಾಯಿ ಕೆಂಡಾಮಂಡಲರಾಗಿದ್ದಾರೆ.

ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ. ಇದರ ಬಗ್ಗೆ ಚುನಾವಣಾ ಆಯೋಗ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ. ಪ್ರತೀ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್ ಗೆ ಗೃಹಲಕ್ಷ್ಮಿ ಹಣ ಹಾಕುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಹಣದ ಕಂತನ್ನು ಮಹಿಳೆಯರ ಖಾತೆಗೆ ಒಟ್ಟಿಗೇ ಹಾಕಿತ್ತು. ಇದೀಗ ಉಪಚುನಾವಣೆಗೆ ಮುನ್ನವೂ ಹಣ ವರ್ಗಾವಣೆ ಮಾಡಿದೆ. ಸರ್ಕಾರ ಪ್ರತೀ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತನ್ನ ರೊಟ್ಟಿ ಸುಡುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಚುನಾವಣೆಗೆ ಕಾಂಗ್ರೆಸ್ ಸರ್ಕಾರದ ಹಣ ಬಳಕೆ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಚುನಾವಣೆ ಹೊಸ್ತಿಲಲ್ಲಿ ಗೃಹಲಕ್ಷ್ಮಿ ಹಣ ಹಾಕುವುದೂ ಕೂಡಾ ಮತದಾರರಿಗೆ ಅಮಿಷವೊಡ್ಡಿದಂತೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

ಮುಂದಿನ ಸುದ್ದಿ
Show comments