Webdunia - Bharat's app for daily news and videos

Install App

ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಹೊರಟ್ಟಿ ಗರಂ

Webdunia
ಶನಿವಾರ, 17 ಸೆಪ್ಟಂಬರ್ 2016 (17:08 IST)
ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ಮಹಾನಗರ ಪಾಲಿಕೆಯಲ್ಲಿ ಸಭೆ ನಡೆಸಿರುವುದ್ದಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಗರಂ ಆಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. 
 
ಸಂಸದ ಪ್ರಹ್ಲಾದ ಜೋಶಿ ತಮ್ಮ ಪಕ್ಷದ ಜನಪ್ರತಿನಿಧಿಗಳನ್ನು ಕರೆದುಕೊಂಡು ಏಕಪಕ್ಷೀಯವಾಗಿ ಸಭೆ ನಡೆಸುವ ಮೂಲಕ ಮಹಾನಗರ ಪಾಲಿಕೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಬಸವರಾಜ್ ಹೊರಟ್ಟಿ ಆರೋಪಿಸಿದ್ದು, ಮುಂದೆ ಈ ರೀತಿಯಾಗದಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. 
 
ಪ್ರಹ್ಲಾದ್ ಜೋಶಿ ಯಾವ ಅಧಿಕಾರದಿಂದ ಪಾಲಿಕೆಯಲ್ಲಿ ಸಭೆ ಕರೆದಿದ್ದಾರೆ? ಅವರ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬಹುದೇ? ಹಾಗಾದರೇ ಎಲ್ಲಾ ಜನಪ್ರತಿನಿಧಿಗಳು ಪಾಲಿಕೆಯಲ್ಲಿ ಸಭೆ ಕರೆಯಬಹುದೇ? ಎಂದು ಪ್ರಶ್ನಿಸಿದರು.
 
ಹೀಗೆ ಸಭೆಯನ್ನು ನಡೆಸಿದರೇ ಪಾಲಿಕೆ, ಬಸ್ ನಿಲ್ದಾಣ ಮತ್ತು ರೆಲ್ವೆ ಸ್ಟೇಶನ್‌ಗಳಲ್ಲಿ ನಡೆಯುವ ಸಭೆಯಂತಾಗುತ್ತದೆ. ಸಂಸದರು ಹೊಸ ಕಾನೂನು ರೂಪಿಸಲು ಹೊರಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಲೇವಡಿ ಮಾಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments