Select Your Language

Notifications

webdunia
webdunia
webdunia
webdunia

ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ

ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ
ಧಾರವಾಡ , ಭಾನುವಾರ, 18 ಡಿಸೆಂಬರ್ 2022 (11:24 IST)
ಧಾರವಾಡ : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇದೇ 21 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತವಾಗಿದೆ.

ಹೊರಟ್ಟಿಯವರನ್ನು ಅಭ್ಯರ್ಥಿ ಎಂದು ಇಂದು ಸಂಜೆಯೇ ಅಂತಿಮವಾಗಿ ಬಿಜೆಪಿ ಘೋಷಿಸುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಹೊರಟ್ಟಿ ಅವರು ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೀಗಾಗಿ ಇಂದು ಸಂಜೆ ಅವರ ಹೆಸರನ್ನು ಅಂತಿಮ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. 

ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು, ಇಂದು ಬೆಳಿಗ್ಗೆ ರವಿಕುಮಾರ್ ಅವರು ನನಗೆ ದೂರವಾಣಿ ಕರೆ ಮಾಡಿ ನೀವು ಅಭ್ಯರ್ಥಿಗಳಾಗಿದ್ದೀರಿ, ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಅಂದಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. 

ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ, ಅಧಿವೇಶನದಲ್ಲಿ ಧರಣಿ ಮಾಡೋದು ಬೇಡ ಎಂದು ನಾನು ಪ್ರತಿ ಬಾರಿಯೂ ಹೇಳುತ್ತಾ ಬಂದಿದ್ದೇನೆ. ನಾನು ಸಭಾಪತಿಯಾಗಿದ್ದಾಗ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದೇ ಎರಡು ದಿನ ಮೀಸಲಿಟ್ಟಿದ್ದೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗುವನ್ನು 3ನೇ ಅಂತಸ್ತಿನಿಂದ ಬಿಸಾಕಿ ತಾನು ಜಿಗಿದ ತಂದೆ?