Webdunia - Bharat's app for daily news and videos

Install App

ಕಾಂಗ್ರೆಸ್‌ನಲ್ಲಿ ಹೆಚ್ಚಿದ ಗದ್ದುಗೆ ಗುದ್ದಾಟ: ನಾನೂ ಸಿಎಂ ಆಕಾಂಕ್ಷಿ ಎಂದ ಬಸವರಾಜ ರಾಯರಡ್ಡಿ

Sampriya
ಸೋಮವಾರ, 9 ಸೆಪ್ಟಂಬರ್ 2024 (15:12 IST)
Photo Courtesy X
ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಗದ್ದುಗೆಗೆ ಗುದ್ದಾಟ ಜೋರಾಗುತ್ತಿದೆ. ಕಾಂಗ್ರೆಸ್‌ ನಾಯಕರು ಪೈಪೋಟಿಗೆ ಬಿದ್ದವರಂತೆ ಹೇಳಿಕೆಯ ಮೇಲೆ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರ ಸರದಿ.

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಬೇಕು ಎಂದು ಕೆಲವರು ಆಸೆ ಪಡುತ್ತಿದ್ದಾರೆ. ಆ ಹುದ್ದೆ ಖಾಲಿಯಿಲ್ಲ. ಆದರೆ ಬೇರೆಯವರಿಗೆ ಸಿ.ಎಂ. ಸ್ಥಾನ ಕೊಡುವುದಾದರೆ ನಾನೂ ಆಕಾಂಕ್ಷಿ. ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿ.ಎಂ. ಸ್ಥಾನ ಕೊಡುವುದಾದರೆ ನಾನೇ ಮುಂಚೂಣಿಯಲ್ಲಿರುವೆ ಎಂದು ರಾಯರೆಡ್ಡಿ ಹೇಳಿದರು.

ಸಿದ್ದರಾಮಯ್ಯ ಮುಂದಿನ ಮೂರೂವರೆ ವರ್ಷ ಸಿ.ಎಂ. ಆಗಿರಬೇಕು. ಆಗಮಾತ್ರ ರಾಜ್ಯ ಅಭಿವೃದ್ಧಿ ಆಗುತ್ತದೆ. ಅವರೇ ಮುಂದುವರೆಯಬೇಕು ಅಂತ ನಮ್ಮ ಆಸೆಯಿದೆ. ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ನಿಮಗೆ ಹೇಳಿದವರು ಯಾರು ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

ಆರ್.ವಿ. ದೇಶಪಾಂಡೆ ಮುಖ್ಯಮಂತ್ರಿ ಸ್ಥಾನ ಕುರಿತು ನೀಡಿದ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ. ನಾನು ಕೂಡ ಲಿಂಗಾಯತ ನಾಯಕ. ಬಿ.ಆರ್. ಪಾಟೀಲ ಹಾಗೂ‌ ನಾನು ಹಿರಿಯರಿದ್ದೇವೆ. ನಾನು ಸಿಎಂ ಯಾಕೆ ಆಗಬಾರದು, ನಮ್ಮ ಪಕ್ಷ ಲಿಂಗಾಯತ ಸಮುದಾಯಕ್ಕೆ ಕೊಡುವುದಾದರೆ ನನಗೆ ಸ್ಥಾನ ನೀಡಲಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments