ಆಧಿಕಾರ ಬೇಕು ಅಂದರೆ ಸಾಯಬೇಕಪ್ಪ: ಮೋದಿ ಸೆಕ್ಯೂರಿಟಿ ಬಗ್ಗೆ ಸಚಿವ ರಾಯರೆಡ್ಡಿ ವಿವಾದಾತ್ಮಕ ಹೇಳಿಕೆ

Webdunia
ಶುಕ್ರವಾರ, 21 ಏಪ್ರಿಲ್ 2017 (23:46 IST)
ಕೆಂಪು ಗೂಟದ ಕಾರು ನಿಷೇಧದ ಬಗ್ಗೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಬಸವರಾಜ ರಾಯರೆಡ್ಡಿ ಇದು ಕೇವಲ ಪೋಸ್ ಅಷ್ಟೇ ಇದರಿಂದ ಯಾವುದೇ ಬದಲಾವಣೆ ಬರಲ್ಲ. ವಿಐಪಿ ಸಂಸ್ಕೃತಿ ಬೇಡ ಎಂದಾದರೆ, ಮೋದಿ ಸೆಕ್ಯೂರಿಟಿ  ತೆಗೆದು ಹಾಕಲಿ ಎಂದರು. ಮೋದಿಗೆ ಭಯೋತ್ಪಾದಕರಿಂದ ಜೀವ ಬೆದರಿಕೆ ಇದೆಯಲ್ಲ ಎಂದು ವರದಿಗಾರ ಕೇಳಿದ್ದಕ್ಕೆ ಸಾಯಲಿ, ಅಧಿಕಾರ ಬೇಕೆಂದರೆ ಸಾಯ ಬೇಕಪ್ಪಾ. ಅಧಿಕಾರ ಬೇಡವೆಂದರೆ ಮನೆಯಲ್ಲೇ ಕೂರಲಿ ಎಂದು ಉತ್ತರಿಸಿದ್ದಾರೆ.

ಬಸವರಾಜ ರಾಯ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ದೇಶದ ಪ್ರಧಾನಿಗೆ ಈ ರೀತಿ ಹೇಳುವುದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

ವಿವಿಐಪಿ ಸಂಸ್ಕೃತಿ ತೆಗೆದು ಹಾಕುವ ನಿಟ್ಟಿನಲ್ಲಿ ಇತ್ತೀಚೆಗೆ ಕೆಂಪು ಗೂಟದ ಕಾರು ಬಳಸದಂತೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿತ್ತು. ಪ್ರಧಾನಿ, ರಾಷ್ಟ್ರಪತಿ, ನ್ಯಾಯಮೂರ್ತಿಗಳೂ ಸೇರಿ ಎಲ್ಲರಿಗೂ ಒಂದೇ ನ್ಯಾಯ  ಎಂಬ ಆದೇಶ ಹೊರಬಿದ್ದಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments