Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ಬಸವೇಶ್ವರ ಪುತ್ಥಳಿ ತೆರವು

Webdunia
ಬುಧವಾರ, 1 ಫೆಬ್ರವರಿ 2023 (21:35 IST)
ಹುಬ್ಬಳ್ಳಿಯಲ್ಲಿ ಸಾಕಷ್ಟು ವಿರೋಧಗಳ ನಡುವೆಯೂ ಫ್ಲೈಓವರ್ ನಿರ್ಮಾಣಕ್ಕಾಗಿ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ತೆರವು ಮಾಡಲಾಗಿದೆ. ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹಲವು ಕಡೆ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದ್ದು, ಇದರಲ್ಲಿ ಒಂದು ಫ್ಲೈಓವರ್ ಬಸವನದಲ್ಲಿರುವ ಬಸವೇಶ್ವರರ ಪುತ್ಥಳಿ ಮೇಲೆ ಹಾದುಹೋಗಲಿದೆ. ಆದರೆ ಇದಕ್ಕೆ ಲಿಂಗಾಯತ ಸಮುದಾಯದಿಂದ ತೀವ್ರ ವಿರೋಧವಿದೆ. ಹೀಗಾಗಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಫ್ಲೈ ಓವರ್ ಈಗಾಗಲೇ ಜಿಲ್ಲಾಡಳಿತ, ಮಹಾನಗರ ಪಾಲಿಕೆ ವತಿಯಿಂದ ಸಾಕಷ್ಟು ಬಾರಿ ಲಿಂಗಾಯತ ಮುಖಂಡರ ಜೊತೆಗೆ ಸಭೆ ನಡೆಸಲಾಗಿತ್ತು. ಸಭೆಗಳಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಜೊತೆಗೆ ಒಮ್ಮತವು ಬಂದಿರಲಿಲ್ಲ. ಹೀಗಾಗಿ ಪುತ್ಥಳಿ ತೆರವು ಕಾರ್ಯವನ್ನು ಇಷ್ಟು ದಿನ ನಿಲ್ಲಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಏಕಾಏಕಿ ತಾಂತ್ರಿಕ ಉಪಕರಣಗಳ ಮೂಲಕ ಬಸವೇಶ್ವರರ ಮೂರ್ತಿಯನ್ನು ತೆರವು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments