Webdunia - Bharat's app for daily news and videos

Install App

ರಮ್ಯಾ ಪರವಾಗಿ ಪ್ರಿಯಾಂಕ್​​ ಖರ್ಗೆ ಬ್ಯಾಟಿಂಗ್

Webdunia
ಶುಕ್ರವಾರ, 13 ಮೇ 2022 (15:31 IST)
ರಾಜ್ಯ ಕಾಂಗ್ರೆಸ್​ನಲ್ಲಿ ಪರಸ್ಪರ ಟ್ವೀಟ್​ ವಾರ್​ ಮುಂದುವರಿದಿದೆ. ಎಂ.ಬಿ.ಪಾಟೀಲ್ ವಿರುದ್ಧ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್​ನ ಹಿರಿಯ ನಾಯಕರು ಬೇಸರ ವ್ಯಕ್ತಪಡಿಸುತ್ತಿದ್ದು, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.
ಇದಕ್ಕೆ ಶಾಸಕ ಪ್ರೀಯಾಂಕ್ ಖರ್ಗೆ ಹೊರತಾಗಿಲ್ಲ. ರಮ್ಯಾ ಅವರು ಪಕ್ಷಕ್ಕೆ ತಮ್ಮದೆ ಆದ ಕೋಡುಗೆ ನೀಡಿದ್ದಾರೆ.ಸಂಸದರಾಗಿ ಕೆಲಸ ಮಾಡಿದ್ದಾರೆ,ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ ಎಂದು ರಮ್ಯ ಪರವಾಗಿ ಬ್ಯಾಟ್​​​​​ ಬೀಸಿದ್ದಾರೆ. ಬಿಜೆಪಿ ಕುರಿತು ಮಾತನಾಡಿದ ಖರ್ಗೆ ಬಿಜೆಪಿ  ತಟ್ಟೆಯಲ್ಲೆ ಹೆಗ್ಗಣ ಬಿದ್ದಿದೆ ಅದನ್ನ ಮೊದಲು ನೋಡಿಕೊಳ್ಳಲಿ, ನಮ್ಮ ಬಗ್ಗೆ ಚಿಂತೆ ಮಾಡೋದನ್ನ ಕಡಿಮೆ ಮಾಡಲಿ ಎಂದು ಹೇಳಿದ್ರು. ಯತ್ನಾಳ್​​​ ಬಿಜೆಪಿ ವಿರುದ್ಧ ಮಾತನಾಡಿದ್ರು ಅದರ ವಿರುದ್ದ ಕಟೀಲ್ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯನ್ನು ಪ್ರಶ್ನೆ ಮಾಡಿದ್ರು. ಬಿಜೆಪಿಯಲ್ಲಿ ಸಿಡಿ ಕೊಟ್ಟರೆ ಮಂತ್ರಿ ಆಗ್ತಾರೆ. ಸಂಪುಟ ರಚನೆ ಸಮೀಪ ಬಂದಿದೆ ಆದ್ರಿಂದ ಮತ್ತೆ ಸಿಡಿ ರೆಡಿ ಆಗ್ತವೆ. ಇದು ನನ್ನ ಹೇಳಿಕೆಯಲ್ಲ ಅವರ ಪಕ್ಷದವರೆ ಹೇಳಿರೋದನ್ನ ನಾನು ಹೇಳ್ತಿದ್ದಿನಿ ಅಷ್ಟೆ. ಇಲ್ಲ ಅಂದ್ರೆ ಇದಕ್ಕೆ ಮತ್ತೆ ನನಗೆ ನೋಟಿಸ್ ಕೊಡ್ತಾರೆ ಎಂದು ಪ್ರಿಯಾಂಕ್​​​ ಖರ್ಗೆ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments