ರಮ್ಯಾ ಪರವಾಗಿ ಪ್ರಿಯಾಂಕ್​​ ಖರ್ಗೆ ಬ್ಯಾಟಿಂಗ್

Webdunia
ಶುಕ್ರವಾರ, 13 ಮೇ 2022 (15:31 IST)
ರಾಜ್ಯ ಕಾಂಗ್ರೆಸ್​ನಲ್ಲಿ ಪರಸ್ಪರ ಟ್ವೀಟ್​ ವಾರ್​ ಮುಂದುವರಿದಿದೆ. ಎಂ.ಬಿ.ಪಾಟೀಲ್ ವಿರುದ್ಧ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್​ನ ಹಿರಿಯ ನಾಯಕರು ಬೇಸರ ವ್ಯಕ್ತಪಡಿಸುತ್ತಿದ್ದು, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.
ಇದಕ್ಕೆ ಶಾಸಕ ಪ್ರೀಯಾಂಕ್ ಖರ್ಗೆ ಹೊರತಾಗಿಲ್ಲ. ರಮ್ಯಾ ಅವರು ಪಕ್ಷಕ್ಕೆ ತಮ್ಮದೆ ಆದ ಕೋಡುಗೆ ನೀಡಿದ್ದಾರೆ.ಸಂಸದರಾಗಿ ಕೆಲಸ ಮಾಡಿದ್ದಾರೆ,ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ ಎಂದು ರಮ್ಯ ಪರವಾಗಿ ಬ್ಯಾಟ್​​​​​ ಬೀಸಿದ್ದಾರೆ. ಬಿಜೆಪಿ ಕುರಿತು ಮಾತನಾಡಿದ ಖರ್ಗೆ ಬಿಜೆಪಿ  ತಟ್ಟೆಯಲ್ಲೆ ಹೆಗ್ಗಣ ಬಿದ್ದಿದೆ ಅದನ್ನ ಮೊದಲು ನೋಡಿಕೊಳ್ಳಲಿ, ನಮ್ಮ ಬಗ್ಗೆ ಚಿಂತೆ ಮಾಡೋದನ್ನ ಕಡಿಮೆ ಮಾಡಲಿ ಎಂದು ಹೇಳಿದ್ರು. ಯತ್ನಾಳ್​​​ ಬಿಜೆಪಿ ವಿರುದ್ಧ ಮಾತನಾಡಿದ್ರು ಅದರ ವಿರುದ್ದ ಕಟೀಲ್ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯನ್ನು ಪ್ರಶ್ನೆ ಮಾಡಿದ್ರು. ಬಿಜೆಪಿಯಲ್ಲಿ ಸಿಡಿ ಕೊಟ್ಟರೆ ಮಂತ್ರಿ ಆಗ್ತಾರೆ. ಸಂಪುಟ ರಚನೆ ಸಮೀಪ ಬಂದಿದೆ ಆದ್ರಿಂದ ಮತ್ತೆ ಸಿಡಿ ರೆಡಿ ಆಗ್ತವೆ. ಇದು ನನ್ನ ಹೇಳಿಕೆಯಲ್ಲ ಅವರ ಪಕ್ಷದವರೆ ಹೇಳಿರೋದನ್ನ ನಾನು ಹೇಳ್ತಿದ್ದಿನಿ ಅಷ್ಟೆ. ಇಲ್ಲ ಅಂದ್ರೆ ಇದಕ್ಕೆ ಮತ್ತೆ ನನಗೆ ನೋಟಿಸ್ ಕೊಡ್ತಾರೆ ಎಂದು ಪ್ರಿಯಾಂಕ್​​​ ಖರ್ಗೆ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments