Webdunia - Bharat's app for daily news and videos

Install App

ಅಳೋ ಗಂಡಸನ್ನ ನಂಬಬಾರದು, ನಿಖಿಲ್‌ ಕುಮಾರಸ್ವಾಮಿ ಕಾಲೇಳೆದ ಯೋಗೇಶ್ವರ್‌

Sampriya
ಭಾನುವಾರ, 3 ನವೆಂಬರ್ 2024 (17:07 IST)
Photo Courtesy X
ರಾಮನಗರ: ಕರ್ನಾಟಕ ವಿಧಾನಸಭೆ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮೈತ್ರಿ ಅಭ್ಯರ್ಥಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಅವರು " ಅಳೋ ಗಂಡಸನ್ನ ನಂಬಬಾರದು " ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ.

ಪ್ರಚಾರ ವೇಳೆ ನಿಖಿಲ್ ಕುಮಾರಸ್ವಾಮಿ ಈ ಹಿಂದಿನ ಚುನಾವಣೆಯ ಸೋಲನ್ನು ನೆನೆದು ಕಾರ್ಯಕರ್ತರ ಮುಂದೆ ಕಣ್ಣೀರು ಹಾಕಿದ್ದರು. "ನಾನು ಮಾಜಿ ಸಿಎಂ ಮಗ ಹಾಗೂ ಮಾಜಿ ಪ್ರಧಾನಿ ಮೊಮ್ಮಗನಾಗಿದ್ದೇ ನನ್ನ ದುರಾದೃಷ್ಟ ಇರಬೇಕೆನೋ? " ಎಂದು ಪ್ರಶ್ನಿಸಿದ್ದರು. ಈ ವೇಳೆ ಕಾರ್ಯಕರ್ತರು ನಿಖಿಲ್‌ ಅವರನ್ನು ಸಮಾಧಾನ ಮಾಡಿದ್ದರು. ಈ ವಿಚಾರವನ್ನು ಕಾಂಗ್ರೆಸ್‌ ನಾಯಕರು ಲೇವಡಿ ಮಾಡಿದ್ದರು. ಸದ್ಯ ಸಿಪಿ ಯೋಗೇಶ್ವರ್‌ ಕೂಡ ನಿಖಿಲ್‌ಗೆ ಪರೋಕ್ಷವಾಗಿ ಲೇವಡಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಏನೂ ಅಭಿವೃದ್ಧಿ ಮಾಡದೇ ಮಗನನ್ನು ತಂದು ನಿಲ್ಲಿಸಿದ್ದಾರೆ. ಈ ತಾಲ್ಲೂಕಿಗೆ ಯಾಕೆ ಕುಮಾರಸ್ವಾಮಿ ಬಂದ್ರು, ಯಾಕೆ ಬಿಟ್ಟುಹೋದ್ರೋ ಗೊತ್ತಿಲ್ಲ. ಕುಮಾರಸ್ವಾಮಿ ಎರಡು ಬಾರಿ ಗೆದ್ದು ಯಾವುದೇ ಅಭಿವೃದ್ಧಿ ಮಾಡಿಲ್ಲ. ಅವರದ್ದು ಸ್ವಾರ್ಥ ರಾಜಕಾರಣ. ಜನರ ಅಭಿವೃದ್ಧಿ ಮಾಡದೇ ಮಗನನ್ನ ತಂದು ನಿಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಅವರಿಗೆ ಜನವಿರೋಧಿ ಅಲೆ ಇದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments