ಪಾಲಿಕೆ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡದ ಅವಶೇಷಗಳನ್ನು ಹಾಕಿದವರಿಗೆ ಅಧಿಕಾರಿಗಳಿಂದ ದಂಡಾಸ್ತ್ರ....

Webdunia
ಶನಿವಾರ, 10 ಜುಲೈ 2021 (14:13 IST)
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡಗಳ ಭಗ್ನಾವೇಶಗಳನ್ನು ಹಾಕುವುದು, ವಾಹನಗಳ ನಿಲುಗಡೆ, ತಳ್ಳುವ ಗಾಡಿಗಳ ಮೂಲಕ ವ್ಯಾಪಾರ ಮಾಡುವುದನ್ನು ಪಾಲಿಕೆ ನಿಷೇಧಿಸಿ ಈಗಾಗಲೇ ಆದೇಶ ಹೊರಡಿಸಿದೆ. ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಪಾದಚಾರಿಗಳಿಗೆ ಯಾವುದೇ ಅನಾನುಕೂಲ ಮಾಡಿದ ವೇಳೆ ಅಂತಹವರ ಮೇಲೆ ದಂಡ ವಿಧಿಸುವ ಜೊತೆಗೆ ಕಾನೂನು ರೀತಿಯ ಕ್ರಮಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಕಟ್ಟುನಿಟ್ಟಾಗಿ ತಿಳಿಸಿದೆ. 
 
ಫೀಲ್ಡ್ ಗಿಳಿದ ಪಾಲಿಕೆ ಅಧಿಕಾರಿಗಳು: 
 
ಈ ವಿಷಯಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರದ (ವಾರ್ಡ್-145) 3ನೇ ಕ್ರಾಸ್  ವ್ಯಾಪ್ತಿಯಲ್ಲಿ ಕಟ್ಟಡದ ಭಗ್ನಾವೇಶಗಳನ್ನು ಪಾದಚಾರಿ ಮಾರ್ಗದಲ್ಲಿ ಹಾಕಿದ್ದರು. ಇದರಿಂದ ಪಾದಚಾರಿಗಳಿಗೆ ಅನಾನುಕೂಲವಾಗುತ್ತಿದ್ದು, ಸ್ಥಳಕ್ಕೆ ಮಾರ್ಷಲ್ ಮೇಲ್ವಿಚಾರಕ ಹಾಗೂ ಮಾರ್ಷಲ್ ಗಳು ಸ್ಥಳೀಯ ಅಭಿಯಂತರರೊಂದಿಗೆ ತೆರಳಿ ಸ್ಥಳದಲ್ಲಿಯೇ 10,000 ರೂ ದಂಡ ವಿಧಿಸಿ ಇನ್ನು ಮುಂದೆ ಈ ರೀತಿ ಸಾರ್ವಜನಿಕ ತೊಂದರೆ ಮಾಡದಂತೆ ಕಟ್ಟಡ ಮಾಲೀಕರಿಗೆ ತಾಕೀತು ಮಾಡಿದ್ದಾರೆ.
 
ನಗರದ ಎಲ್ಲಾ ಕಟ್ಟಡದ ಮಾಲೀಕರು, ವ್ಯಾಪಾರಿಗಳು ಸಾರ್ವಜನಿಕರು ಒಡಾಡುವ ಸ್ಥಳಗಳಲ್ಲಿ ಅಡಚಣೆ ಅಥವಾ ತೊಂದರೆ ಉಂಟಾಗದಂತೆ ಅಗತ್ಯ ಕ್ರಮವಹಿಸಿ ನಗರದ ನಾಗರೀಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪಾಲಿಕೆ ಅಧಿಕಾರಿಗಳು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments