Select Your Language

Notifications

webdunia
webdunia
webdunia
webdunia

ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾರನಿಗೆ BBMP 3 ಲಕ್ಷ ರೂ. ದಂಡ..!

ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾರನಿಗೆ BBMP 3 ಲಕ್ಷ ರೂ. ದಂಡ..!
bangalore , ಶನಿವಾರ, 25 ಜೂನ್ 2022 (20:14 IST)
ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಜೂನ್ 20ಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾರನಿಗೆ ಬಿಬಿಎಂಪಿ 3 ಲಕ್ಷ ರೂ. ದಂಡ ವಿಧಿಸಿದೆ. ಕಳಪೆ ಕಾಮಗಾರಿ ಹಿನ್ನಲೆ ಬಿಬಿಎಂಪಿ ಮೂವರು ಅಧಿಕಾರಿಗಳಿಗೆ ಮುಖ್ಯ ಅಭಿಯಂತರ ಪ್ರಹ್ಲಾದ್ ಶೋಕಾಸ್ ನೋಟಿಸ್ ಜಾರಿ ಮಾಡಿ ನಿನ್ನೆ ಆದೇಶ ಹೊರಡಿಸಿದ್ದರು. ನೋಟಿಸ್ ಜಾರಿ ಮಾಡಿದ ಬೆನ್ನಲೆ ಗುತ್ತಿಗೆದಾರ ರಮೇಶ್ ಎಂಬುವವರಿಗೆ ಬಿಬಿಎಂಪಿ 3 ಲಕ್ಷ ರೂ ದಂಡ ವಿಧಿಸಿದೆ. 23 ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ರಸ್ತೆಯ ಸ್ಥಿತಿ ನೋಡುವಂತಿಲ್ಲ. ಸದ್ಯ ಬಿಬಿಎಂಪಿ ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪುಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿತ್ತು. ಈ ಕುರಿತಂತೆ ನಿನ್ನೆ ರಾಜ್ ನ್ಯೂಸ್ ವಿಸ್ತೃತ ವರದಿ ಸುದ್ದಿ ಮಾಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಹೋಟೆಲ್ 24/7 ಓಪನ್