Webdunia - Bharat's app for daily news and videos

Install App

ಬಿಬಿಎಂಪಿ ವತಿಯಿಂದ 5 ಲಕ್ಷ ಅನುದಾನ

Webdunia
ಸೋಮವಾರ, 5 ಸೆಪ್ಟಂಬರ್ 2022 (17:09 IST)

ಪಾಲಿಕೆ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಒಂಟಿ ಮನೆ ಯೋಜನೆಯಡಿ ಮನೆ ನಿರ್ಮಾಣಕ್ಕೆ ನೀಡಲಾಗುವ .5 ಲಕ್ಷ ಸಹಾಯಧನ ನೀಡುವ ಯೋಜನೆ ಇದೆ. ನಗರದಲ್ಲಿ 20*30 ಅಥವಾ ಕಡಿಮೆ ಅಳತೆಯ ಸ್ವಂತ ನಿವೇಶನ ಹೊಂದಿದ ಆರ್ಥಿಕ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಆದರೆ, ನಿವೇಶನ ಖರೀದಿಸಲು ಆಗದ ಬಡವರು ಸ್ವಂತ ಮನೆ ಕಟ್ಟಲು ಆಗುತ್ತಿಲ್ಲ. ಹೀಗಾಗಿ, ಈ ಒಂಟಿಮನೆ ಯೋಜನೆಯಡಿ ನೀಡುವ ಸ್ವಲ್ಪ ಅನುದಾನವನ್ನು ಸರ್ಕಾರದ ವಿವಿಧ ಯೋಜನೆಗಳಡಿ ನಿರ್ಮಿಸಲಾದ ಮನೆಗಳ ಖರೀದಿಗೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ ಎಂದರು.

ಈ ಯೋಜನೆಗೆ 'ಬೆಂಗಳೂರು ಅಮೃತೋತ್ಸವ ಮನೆ'(Bengaluru Amrit Mahotsav Mane) ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಪಾಲಿಕೆಯಿಂದ 2022-23ನೇ ಸಾಲಿನಲ್ಲಿ ಒಂಟಿ ಮನೆ ಯೋಜನೆ ಜಾರಿಗಾಗಿ .100 ಕೋಟಿ ಮೀಸಲಿಡಲಾಗಿದೆ. ಇದರಡಿ ಒಟ್ಟು ಎರಡು ಸಾವಿರ ಫಲಾನುಭವಿಗಳಿಗೆ ಅನುಕೂಲ ಆಗಲಿದೆ. ಈ ಪೈಕಿ ಕಳೆದ 2-3 ವರ್ಷದ ಹಿಂದೆ ಅರ್ಜಿ ಸಲ್ಲಿಸಿ ಅನುದಾನ ನಿರೀಕ್ಷೆಯಲ್ಲಿದ್ದ 72 ಫಲಾನುಭವಿಗಳಿಗೆ ತಲಾ .5 ಲಕ್ಷ ಗಳಂತೆ ಅನುದಾನ ನೀಡಲು (3.6 ಕೋಟಿ ರು.) ತೀರ್ಮಾನಿಸಲಾಗಿದೆ. ಉಳಿದ ಅನುದಾನದಲ್ಲಿ ಹೊಸದಾಗಿ ಸರ್ಕಾರಿ ಪ್ರಾಧಿಕಾರಗಳಿಂದ ನಿರ್ಮಿಸಲಾಗುತ್ತಿರುವ ಅಪಾರ್ಚ್‌ಮೆಂಟ್‌ಗಳಲ್ಲಿ ಮನೆ ಖರೀದಿಸುವವರಿಗೆ ನೀಡಲು .20 ಕೋಟಿ ಮೀಸಲಿಡಲಾಗಿದೆ. ಇದರಿಂದ 400 ಮಂದಿಗೆ ಅನುಕೂಲವಾಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments