Webdunia - Bharat's app for daily news and videos

Install App

ಬಿಬಿಎಂಪಿ ವತಿಯಿಂದ 5 ಲಕ್ಷ ಅನುದಾನ

Webdunia
ಸೋಮವಾರ, 5 ಸೆಪ್ಟಂಬರ್ 2022 (17:09 IST)

ಪಾಲಿಕೆ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಒಂಟಿ ಮನೆ ಯೋಜನೆಯಡಿ ಮನೆ ನಿರ್ಮಾಣಕ್ಕೆ ನೀಡಲಾಗುವ .5 ಲಕ್ಷ ಸಹಾಯಧನ ನೀಡುವ ಯೋಜನೆ ಇದೆ. ನಗರದಲ್ಲಿ 20*30 ಅಥವಾ ಕಡಿಮೆ ಅಳತೆಯ ಸ್ವಂತ ನಿವೇಶನ ಹೊಂದಿದ ಆರ್ಥಿಕ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಆದರೆ, ನಿವೇಶನ ಖರೀದಿಸಲು ಆಗದ ಬಡವರು ಸ್ವಂತ ಮನೆ ಕಟ್ಟಲು ಆಗುತ್ತಿಲ್ಲ. ಹೀಗಾಗಿ, ಈ ಒಂಟಿಮನೆ ಯೋಜನೆಯಡಿ ನೀಡುವ ಸ್ವಲ್ಪ ಅನುದಾನವನ್ನು ಸರ್ಕಾರದ ವಿವಿಧ ಯೋಜನೆಗಳಡಿ ನಿರ್ಮಿಸಲಾದ ಮನೆಗಳ ಖರೀದಿಗೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ ಎಂದರು.

ಈ ಯೋಜನೆಗೆ 'ಬೆಂಗಳೂರು ಅಮೃತೋತ್ಸವ ಮನೆ'(Bengaluru Amrit Mahotsav Mane) ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಪಾಲಿಕೆಯಿಂದ 2022-23ನೇ ಸಾಲಿನಲ್ಲಿ ಒಂಟಿ ಮನೆ ಯೋಜನೆ ಜಾರಿಗಾಗಿ .100 ಕೋಟಿ ಮೀಸಲಿಡಲಾಗಿದೆ. ಇದರಡಿ ಒಟ್ಟು ಎರಡು ಸಾವಿರ ಫಲಾನುಭವಿಗಳಿಗೆ ಅನುಕೂಲ ಆಗಲಿದೆ. ಈ ಪೈಕಿ ಕಳೆದ 2-3 ವರ್ಷದ ಹಿಂದೆ ಅರ್ಜಿ ಸಲ್ಲಿಸಿ ಅನುದಾನ ನಿರೀಕ್ಷೆಯಲ್ಲಿದ್ದ 72 ಫಲಾನುಭವಿಗಳಿಗೆ ತಲಾ .5 ಲಕ್ಷ ಗಳಂತೆ ಅನುದಾನ ನೀಡಲು (3.6 ಕೋಟಿ ರು.) ತೀರ್ಮಾನಿಸಲಾಗಿದೆ. ಉಳಿದ ಅನುದಾನದಲ್ಲಿ ಹೊಸದಾಗಿ ಸರ್ಕಾರಿ ಪ್ರಾಧಿಕಾರಗಳಿಂದ ನಿರ್ಮಿಸಲಾಗುತ್ತಿರುವ ಅಪಾರ್ಚ್‌ಮೆಂಟ್‌ಗಳಲ್ಲಿ ಮನೆ ಖರೀದಿಸುವವರಿಗೆ ನೀಡಲು .20 ಕೋಟಿ ಮೀಸಲಿಡಲಾಗಿದೆ. ಇದರಿಂದ 400 ಮಂದಿಗೆ ಅನುಕೂಲವಾಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments