ಬಿಬಿಎಂಪಿ ಏರಿಯಾ ವಿಂಗಡಣೆ 225 ಕೋಟಿ ಆರ್ಥಿಕ ಹೊರೆ..!!!

Webdunia
ಭಾನುವಾರ, 17 ಜುಲೈ 2022 (14:56 IST)
ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿರುವ ಬಿಬಿಎಂಪಿ ವಾರ್ಡ್ ವಿಂಗಡಣೆಗೆ ಈಗಾಗಲೇ ಆಕ್ಷೇಪಣೆಗಳು ಎದುರಾಗಿವೆ. ಇದರ ಬೆನ್ನಲ್ಲೇ ಈ 45 ನೂತನ ವಾರ್ಡ್‌ಗಳಿಂದ 225 ಕೋಟಿ ರೂಪಾಯಿ ಆರ್ಥಿಕ ಹೊರೆ ಬೀಳಲಿದೆ.
 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇತ್ತೀಚೆಗೆ ಪುನರ್ ವಿಂಗಡಿಸಿದ್ದ 243 ನೂತನ ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಗುರುವಾರ (ಜುಲೈ 14) ಅಧಿಕೃತ ಮುದ್ರೆ ಹಾಕಿದೆ.
ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿದ್ದ 198 ವಾರ್ಡ್‌ಗಳನ್ನು 2011ರ ಜನಗಣತಿ ಆಧಾರದಲ್ಲಿ ಪ್ರತಿ ವಾರ್ಡ್‌ಗೆ 35 ಸಾವಿರ ಜನರು ಬರುವಂತೆ ವಿಂಗಡಿಸಿ 243ಕ್ಕೆ ಹೆಚ್ಚಿಸಿದೆ.
 
ಇದನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡಿ ಕರಡು ಅಧಿಸೂಚನೆ ಹೊರಡಿಸಿತ್ತು. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ನೂತನ ವಾರ್ಡ್ ಕುರಿತು ಸಾರ್ವಜನಿಕ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸುವಂತೆ ಕೋರಿತ್ತು. ಈಗ ರಚನೆ ಮಾಡಲಾಗಿರುವ ಪ್ರತಿ ಹೊಸ ವಾರ್ಡ್‌ಗೆ ಸರಾಸರಿ 5 ಕೋಟಿ ರೂಪಾಯಿ ಎಂದು ಅಂದಾಜಿಸಿದರೂ 225 ಕೋಟಿ ರೂಪಾಯಿ ಆರ್ಥಿಕ ಹೊರೆ ಬೀಳಲಿದೆ.
 
"2011 ರ ಜನಗಣತಿಯ ಆಧಾರದ ಮೇಲೆ ಗಡಿ ನಿರ್ಣಯ ಮಾಡಲಾಗಿದೆ. ಅದರ ಪ್ರಕಾರ ಬೆಂಗಳೂರು 88 ಲಕ್ಷ ಜನರನ್ನು ಹೊಂದಿದೆ. 198 ವಾರ್ಡ್‌ಗಳಲ್ಲಿ ಪ್ರತಿಯೊಂದೂ ವಾರ್ಡ್ ನಲ್ಲಿ 40,000-45,000 ಜನರಿದ್ದಾರೆ. ಆದರೆ, ಬೆಂಗಳೂರು ನಗರವು ಅಂದಿನಿಂದಲೂ ಮತ್ತಷ್ಟು ಬೆಳೆದಿದೆ. ಆದರೂ ಹಳೆಯ ಅಂಕಿ ಅಂಶಗಳ ಮೇಲೆಯೆ ವಿಂಗಡಣೆ ಮಾಡಲಾಗಿದೆ" ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರನ್ನು ಡೆಕ್ಕನ್ ಹೆರಾಲ್ಡ್ ಉಲ್ಲೇಖಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments