Webdunia - Bharat's app for daily news and videos

Install App

ವಿಶ್ವ ಬ್ಯಾಂಕ್ ಮೊರೆ ಹೋದ BBMP

Webdunia
ಮಂಗಳವಾರ, 11 ಅಕ್ಟೋಬರ್ 2022 (15:09 IST)
ಬೆಂಗಳೂರು ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಹಾಗೂ ಪ್ರವಾಹ ಸ್ಥಳಗಳ ಅಭಿವೃದ್ಧಿಗೆ BBMP ವಿಶ್ವ ಬ್ಯಾಂಕ್​ ಮೊರೆ ಹೋಗಿದೆ. ಸಿಲಿಕಾನ್ ಸಿಟಿ ಕಳೆದ ತಿಂಗಳು ಸುರಿದ ಭಾರಿ ಮಳೆಗೆ ತತ್ತರಿಸಿ ಹೋಗಿದೆ. ನಗರದ ರಸ್ತೆಗಳಿಗೆ ರಾಜಕಾಲುವೆಗಳ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಬೆಂಗಳೂರಿನ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿತ್ತು‌. ಬ್ರ್ಯಾಂಡ್ ಬೆಂಗಳೂರು ಇಮೇಜ್​ಗೂ ಧಕ್ಕೆ ಉಂಟಾಗಿತ್ತು. ರಾಜ್ಯ ಸರ್ಕಾರ ರಾಜಕಾಲುವೆ ದುರಸ್ತಿಗೆ 1500 ಕೋಟಿ ಅನುದಾನ ನೀಡಿತ್ತು. ಆದರೆ BBMP ‌‌1500 ಕೋಟಿ ರಾಜಕಾಲುವೆ ದುರಸ್ತಿಗೆ ಸಾಕಾಗೋದಿಲ್ಲ ಅಂತಿದ್ದಾರೆ. ವಿಶ್ವ ಬ್ಯಾಂಕ್ ಬಳಿ 2000 ಕೋಟಿ ಅನುದಾನಕ್ಕೆ ಮನವಿ ಮಾಡಲು ನಿರ್ಧಾರ ಮಾಡಿದ್ದಾರೆ. ವಿಶ್ವಬ್ಯಾಂಕ್ ತಂಡ ವಾತಾವರಣ ಸ್ಥಿತಿಸ್ಥಾಪಕತ್ವ ಅಧ್ಯಯನಕ್ಕೆ ಆಗಮಿಸಿದೆ. ವಿಶ್ವಬ್ಯಾಂಕ್ ಪ್ರತಿನಿಧಿಗಳು ಪ್ರವಾಹ ಪೀಡಿತ ಪ್ರದೇಶಗಳ ತಪಾಸಣೆ ನಡೆಸುತ್ತಿದ್ದಾರೆ. BBMP ರಾಜಕಾಲುವೆ ಅಭಿವೃದ್ಧಿ, ಕೆರೆ ನೀರಿನ ಸಮರ್ಪಕ ಬಳಕೆಗೆ ಪ್ಲ್ಯಾನ್ ಮಾಡಿದೆ. ವಿಶ್ವ ಬ್ಯಾಂಕ್ ಅನುದಾನದ ನೆರವಿನಿಂದ ಮಳೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments