Webdunia - Bharat's app for daily news and videos

Install App

ರಾತ್ರೋರಾತ್ರಿ ಬಿಬಿಎಂಪಿ ಬಜೆಟ್ ಜನರನ್ನು ಏಪ್ರಿಲ್ ಫುಲ್ ಮಾಡುತ್ತಿದೆ ಬಿಬಿಎಂಪಿ

Webdunia
ಶುಕ್ರವಾರ, 1 ಏಪ್ರಿಲ್ 2022 (14:54 IST)
ಜನ ಸಾಮಾನ್ಯರು ಏಪ್ರಿಲ್ 1ನೇ ತಾರೀಖನ್ನು ಮೂರ್ಖರ ದಿನ ಎಂದು ಆಚರಿಸೋದು ಸರ್ವೇ ಸಾಮಾನ್ಯ. ಆದರೆ, ಬಿಬಿಎಂಪಿ ಅಧಿಕಾರಿಗಳು ಮತ್ತು ಜನಪ್ರತಿನಿಗಳು ಸೇರಿಕೊಂಡು ಒಂದು ದಿನ ಮೊದಲೇ ಇಡಿ ನಗರದ ಜನರನ್ನು ಮೂರ್ಖರನ್ನಾಗಿಸಿದ್ದಾರೆ.
ಕಳ್ಳರಂತೆ ಕದ್ದು ಮುಚ್ಚಿ ರಾತ್ರೋರಾತ್ರಿ ಬಿಬಿಎಂಪಿ ಬಜೆಟ್ ಮಂಡನೆ ಮಾಡಿರುವುದಲ್ಲದೆ ಕಾನೂನಿಗೆ ವಿರೋಧವಾಗಿ ತಮ್ಮ ಮನಸ್ಸಿಗೆ ಬಂದಂತೆ ಬಜೆಟ್ ಮಂಡನೆ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರ ತೆರಿಗೆ ಹಣ ಲೂಟಿ ಹೊಡೆಯಲು ಮುಂದಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
 
1949ರಲ್ಲಿ ಮೇಯರ್‍ಗಿರಿ ಆರಂಭವಾದಾಗಿನಿಂದ ಇಲ್ಲಿಯವರೆಗೆ ಪಾಲಿಕೆ ಕಟ್ಟಡ ಹೊರತುಪಡಿಸಿ ಬೇರೆ ಕಡೆ ಬಜೆಟ್ ಮಂಡನೆ ಮಾಡಿರುವ ಇತಿಹಾಸವಿಲ್ಲ. ಅದರಲ್ಲೂ ಬಜೆಟ್ ಮಂಡನೆ ಮಾಡಬೇಕಾದರೆ, ಮೇಯರ್, ಉಪಮೇಯರ್‍ಗಳು, ಆಯುಕ್ತರ ಹಾಜರಾತಿಯಲ್ಲೇ ಬಜೆಟ್ ಮಂಡನೆ ಮಾಡಬೇಕು. ಒಂದು ವೇಳೆ ಜನಪ್ರತಿನಿಧಿಗಳು ಇಲ್ಲದಿದ್ದರೆ ಅಡಳಿತಾಧಿಕಾರಿಗಳ ಸಮ್ಮುಖದಲ್ಲಿ ಬಜೆಟ್ ಮಂಡನೆ ಮಾಡುವುದು ವಾಡಿಕೆ.
 
ಆದರೆ, ಈ ಬಾರಿ ಬಿಬಿಎಂಪಿ ಕಟ್ಟಡಕ್ಕೆ ಬದಲಾಗಿ ರಾತ್ರೋರಾತ್ರಿ ನಗರಾಭಿವೃದ್ಧಿ ಇಲಾಖೆಯ ರೂಮ್ ನಂಬರ್ 436ರಲ್ಲಿ ಬಜೆಟ್ ಮಂಡನೆ ಮಾಡಿ ತಕ್ಷಣ ಅನುಮೋದನೆ ಪಡೆದುಕೊಂಡಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅದರಲ್ಲೂ ಬಿಬಿಎಂಪಿ ಮುಖ್ಯ ಅಯುಕ್ತರ ಅನುಪಸ್ಥಿತಿಯಲ್ಲಿ ಬಜೆಟ್ ಮಂಡನೆ ಮಾಡಿ ಅಪ್ರೂವಲ್ ಪಡೆದುಕೊಂಡಿರುವುದರ ಹಿಂದೆ ನಗರದ ಪ್ರಭಾವಿ ಸಚಿವರುಗಳ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

ಮುಂದಿನ ಸುದ್ದಿ
Show comments