ಮೇಯರ್ ಗದ್ದುಗೆ ಏರಲು ಕಾಂಗ್ರೆಸ್, ಜೆಡಿಎಸ್ ರಣತಂತ್ರ ರೂಪಿಸುತ್ತಿದ್ದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡರೊಂದಿಗೆ ಚರ್ಚೆ ಆರಂಭಿಸಿದ್ದಾರೆ.
ಬಿಬಿಎಂಪಿ ಗದ್ದುಗೆ ಹಿಡಿಯಲು ಹರಸಾಹಸ ಪಡುತ್ತಿರುವ ಕಾಂಗ್ರೆಸ್ ಪಕ್ಷ, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಮೈತ್ರಿ ರೂಪಿಸಲಲು ಉಭಯ ಪಕ್ಷಗಳ ನಾಯಕರು ಈಗಾಗಲೇ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಮುಖಂಡ ದತ್ತಾ ಮತ್ತು ಚಾಮರಾಜ್ ಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್, ದೇವೇಗೌಡರನ್ನು ಭೇಟಿ ಮಾಡಿ ರಾಜಕೀಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಬಿಬಿಎಂಪಿಯಲ್ಲಿ ಬಹುಮತಕ್ಕೆ 123 ಸ್ಥಾನಗಳ ಅಗತ್ಯವಿದ್ದು, ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ಒಂದಾದರೆ ಸರಳ ಬಹುಮತ ದೊರಕಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.