Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಜೆಡಿಎಸ್.ಕಾಂಗ್ರೆಸ್ ಮೈತ್ರಿ: ಶೀಘ್ರದಲ್ಲಿ ಅಂತಿಮ ನಿರ್ಧಾರ ಎಂದ ಗೌಡರು

ಬಿಬಿಎಂಪಿ ಜೆಡಿಎಸ್.ಕಾಂಗ್ರೆಸ್ ಮೈತ್ರಿ: ಶೀಘ್ರದಲ್ಲಿ ಅಂತಿಮ ನಿರ್ಧಾರ ಎಂದ ಗೌಡರು
ಬೆಂಗಳೂರು , ಶನಿವಾರ, 3 ಸೆಪ್ಟಂಬರ್ 2016 (15:02 IST)
ಇಂದು ಜೆಡಿಎಸ್‌ನ 14 ಪಾಲಿಕೆ ಸದಸ್ಯರನ್ನು ಕರೆದು ಚರ್ಚೆ ನಡೆಸಿದ್ದೇನೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ನಗರದ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ದೇವೇಗೌಡರು, ಮುಂಬರುವ ಮೇಯರ್, ಉಪಮೇಯರ್ ಚುನಾವಣೆ ಮತ್ತು ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿ ಮುಂದುವರಿಕೆ ಕುರಿತಂತೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.
 
ಪಾಲಿಕೆ ಸದಸ್ಯರ ಸಭೆಯಲ್ಲಿ ಪ್ರತಿಯೊಬ್ಬರಿಗೂ ಮಾತನಾಡಲು ಅವಕಾಶ ಕೊಟ್ಟಿದ್ದೇನೆ. ಅವರು ತಮ್ಮ ಮನಸ್ಸಿನಲ್ಲಿರುವುದನ್ನು ಹೇಳಿದ್ದಾರೆ. ಪಕ್ಷದ ಹಿತದೃಷ್ಠಿಗೆ ಅನುಗುಣವಾಗಿ ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
 
ಪಾಲಿಕೆ ಸದಸ್ಯರ ಸಭೆಯಲ್ಲಿ ಯಾವುದೇ ಶಾಸಕರಿಗೆ ಆಹ್ವಾನ ನೀಡಿಲ್ಲ. ಅಗತ್ಯ ಬಿದ್ದಲ್ಲಿ ಶಾಸಕರನ್ನು ಕರೆದು ಚರ್ಚಿಸುತ್ತೇನೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿವಾದ: ನಾರಿಮನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ