Webdunia - Bharat's app for daily news and videos

Install App

ತಾಕತ್ತಿದ್ರೆ ಹೆಸ್ರು ಹೇಳಿ ನೋಡೋಣ: ಕುಮಾರಸ್ವಾಮಿಗೆ ಡಿಕೆಶಿ ಸವಾಲ್

Webdunia
ಸೋಮವಾರ, 20 ಏಪ್ರಿಲ್ 2015 (16:22 IST)
ಸಾರಕ್ಕಿ ಕೆರೆ ಅತಿಕ್ರಮಣ ಕುರಿತಂತೆ ಬಡವರ, ದುರ್ಬಲರ ಮನೆಗಳನ್ನು ಒಡೆಯಲಾಗುತ್ತಿದೆ. ಐಎಎಸ್ ಅಧಿಕಾರಿಗಳು, ಕೆಲ ರಾಜಕಾರಣಿಗಳು ನಗರದಲ್ಲಿ ನೂರಾರು ಕೋಟಿ ಮೌಲ್ಯದ ಭೂಮಿಯನ್ನು ಕಬಳಿಸಿದ್ದಾರೆ. ತಾಕತ್ತಿದ್ರೆ ಅಂತಹ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಜೆಡಿಎಸ್ ಮುಖಂಡ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿಯವರ ತಾಕತ್ತಿನ ಪ್ರಶ್ನೆಯಿಂದ ಕಿಡಿಕಿಡಿಯಾದ ಸಚಿವ ಡಿ.ಕೆ.ಶಿವಕುಮಾರ್ ನಿಮಗೆ ತಾಕತ್ತಿದ್ರೆ ಹೆಸ್ರು ಹೇಳಿ ನೋಡೋಣ. ಕೇವಲ ಆರೋಪಗಳಿಂದ ಯಾವ ಪ್ರಯೋಜನವು ಇಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ ಮುಖಂಡ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಮಾನ ನಿಲ್ದಾಣ ಶಂಕುಸ್ಥಾಪನೆಗೆ ಬಂದಾಗ ಮಾತನಾಡಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವಧಿಯಲ್ಲಿ ಬೆಂಗಳೂರು ಸಾಫ್ಟ್‌ವೇರ್ ಕ್ಷೇತ್ರದಲ್ಲಿ ತುಂಬಾ ಅಭಿವೃದ್ಧಿಯನ್ನು ಮಾಡಿದೆ ಈ ಹಿಂದೆ ಜಪಾನ್ ಅಮೆರಿಕೆಗೆ ತೆರಳುತ್ತಿದ್ದವರು ಇದೀಗ ಬೆಂಗಳೂರು ನಗರವನ್ನು ಹುಡುಕಿ ಬರುತ್ತಿದ್ದಾರೆ ಎಂದು ನೀಡಿದ ಹೇಳಿಕೆಯನ್ನು ಉದಾಹರಿಸಿದ ಶಿವಕುಮಾರ್, ನಿಮ್ಮ ಕಾಲದಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ ಎಂದು ಲೇವಡಿ ಮಾಡಿದರು.     

ಕಾಂಗ್ರೆಸ್ ಪಕ್ಷದಿಂದಲೇ ಮಾತ್ರ ರಾಜ್ಯದ ಅಭಿವೃದ್ಧಿಯಾಗಿದೆಯೇ ಹೊರತು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments