BBMP ಅಗ್ನಿ ದುರಂತ.. ಮೂವರ ವಿರುದ್ಧ FIR..!

Webdunia
ಶನಿವಾರ, 12 ಆಗಸ್ಟ್ 2023 (20:40 IST)
ಬಿಬಿಎಂಪಿ ಕಚೇರಿಯ ಅಗ್ನಿ ಅವಘಡ ಕೇಸ್ ಕೂತುಹಲಕಾರಿಯಾಗ್ತಿದೆ. ದುರಂತಕ್ಕೆ ನಾನಾ ಕಾರಣಗಳು ಕೇಳಿಬರುತ್ತಿದ್ದು, ಮೂರು ಹಂತದ ತನಿಖೆಯೂ ನಡೆಯುತ್ತಿದೆ. ಸದ್ಯ ಪ್ರಕರಣ ಸಂಬಂಧ FIR ಕೂಡ ಆಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.ನಿನ್ನೆ ಸಂಜೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ನಡೆದಿದ್ದ ಬೆಂಕಿ ಅವಘಡ ಕೇಸಿನ ತನಿಖೆ ಚುರುಕು ಪಡೆದಿದೆ. ಸದ್ಯ ಅವಘಡದಲ್ಲಿ ಗಾಯಗೊಂಡ 9 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇತ್ತ ಪೊಲೀಸ್ ಇಲಾಖೆ, ಇಂಧನ ಇಲಾಖೆ & ಬಿಬಿಎಂಪಿಯಿಂದ ಘಟನೆ ಸಂಬಂದ ತನಿಖೆ ಶುರುವಾಗಿದೆ. 

ಸದ್ಯ ಪೊಲೀಸ್ ತನಿಖೆ ಸಂಬಂದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ಹಲಸೂರು ಠಾಣೆಯಲ್ಲಿ ದೂರು ನೀಡಿದ್ರು. ಈ ದೂರಿನ್ವಯ AEE ಗಳಾದ ಆನಂದ್, ಸ್ವಾಮಿ ಹಾಗೂ ಡಿ ಗ್ರೂಪ್ ನೌಕರ ಸುರೇಶ್ ಎಂಬುವರ ಮೇಲೆ IPC 337, 338 ನಿರ್ಲಕ್ಷ್ಯ ಆರೋಪದ ಅಡಿಯಲ್ಲಿ FIR ದಾಖಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದ್ದು, ಮೇಲ್ನೋಟಕ್ಕೆ ಬೆಂಕಿ ಅವಘಡವು ಕೆಮಿಕಲ್ ಟೆಸ್ಟ್ ಮಾಡುವಾಗ ನಿರ್ಲಕ್ಷ್ಯದಿಂದ ನಡೆದಿದೆ ಅನ್ನೋದು ಗೊತ್ತಾಗಿದೆ. 

ಸದ್ಯಕ್ಕೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಪೊಲೀಸರು ಘಟನೆ ಹೇಗಾಯ್ತು, ಯಾವಾಗ ಆಯ್ತು. ಯಾರಿಂದ ಆಯ್ತು ಅನ್ನೋ ಮಾಹಿತಿಗಳನ್ನು ಕಲೆ ಹಾಕ್ತಿದ್ದಾರೆ. ಹಾಗೇ ಕೆಮಿಕಲ್ ಟೆಸ್ಟಿಂಗ್ ಯಾರು ಕೆಲಸ ಮಾಡಬೇಕಿತ್ತು..? ಅವ್ರ ಬದಲಿಗೆ ಬೇರೆ ಯಾರು ಮಾಡಿದ್ದಾರೆ ಅನ್ನೋದನ್ನು ಪರಿಶೀಲನೆ ಮಾಡಲಾಗ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ರಂಜಾನ್ ತಿಂಗಳಲ್ಲಿ ಇರಾನ್, ಗಲ್ಫ್‌ ಸಂಘರ್ಷಕ್ಕೆ ಭಾರತ ಕಳವಳ

ಯುಎಸ್‌, ಇಸ್ರೇಲ್‌ ದಾಳಿಗೆ ಇರಾನ್‌ನಲ್ಲಿ ಸಾವನ್ನಪ್ಪಿದ 160 ವಿದ್ಯಾರ್ಥಿಗಳಿಗೆ ಸಾಮೂಹಿಕ ಅಂತ್ಯಕ್ರಿಯೆ, ಫೋಟೋ

ಎಲ್ಲಿಯೋ ಸತ್ತ ಕ್ರೂರಿಗೆ ನಮ್ಮ ದೇಶದ ಅನ್ನ ತಿಂದು ಇಲ್ಲಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಮುಂದಿನ ಸುದ್ದಿ
Show comments