ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ ಬಿಬಿಎಂಪಿ

Webdunia
ಮಂಗಳವಾರ, 24 ಜನವರಿ 2023 (20:08 IST)
ಗಾರ್ಡನ್ ಸಿಟಿಯನ್ನ ಮತ್ತಷ್ಟು ಸುಂದರವಾಗಿ ಇರಿಸಲು ಶ್ರಮಿಸುವ ಜೀವಿಗಳ ಕಷ್ಟಕ್ಕೆ ಯಾರು ಕ್ಯಾರೇ ಅನ್ನೋದಿಲ್ಲ. ಆದ್ರೆ ಅವರು ಒಂದೇ ಒಂದು ದಿನ ಸರ್ಕಾರ ಮತ್ತು ಅಧಿಕಾರಗಳಂತೆ ನಿರ್ಲಕ್ಷ್ಯ ತೋರಿದ್ರೆ ಗಾರ್ಡನ್ ಸಿಟಿ ಗಾರ್ಬೇಜ್ ಸಿಟಿಯಾಗುವುದಂತು ಪಕ್ಕ. ಅಂತಾ ಕಾಯಕ ಕೈಯಿಗಳಿಗೆ ಸರ್ಕಾರ ಮತ್ತು ಬಿಬಿಎಂಪಿ ಸಿಹಿ ಸುದ್ದಿ ನೀಡಿದೆ.  ಬೆಂಗಳೂರನ್ನ ಸ್ವಚ್ಚವಾಗಿಡಲು ಸಾಲಿಡ್ ವೆಸ್ಟ್ ಮ್ಯಾನೇಜ್ ಮೆಂಟ್ ಅಡಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಬಿಬಿಎಂಪಿ ಸಂತಸದ ಸುದ್ದಿಯನ್ನ ನೀಡಿದೆ. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಪೌರಕಾರ್ಮಿಕರನ್ನ ಖಾಯಂಗೊಳಿಸಲು ಸರ್ಕಾರ ಅನುಮತಿ ನೀಡಿದೆ. ಅನುಮತಿ ನೀಡಿದ ಬೆನ್ನಲ್ಲೆ ಬಿಬಿಎಂಪಿ 3676 ಜನ ಪೌರಕಾರ್ಮಿಕರನ್ನ ಖಾಯಂಗೊಳಿಸಲು ಅರ್ಜಿ ಆಹ್ವಾನ ಮಾಡಿದೆ.

ಇದೇ ತಿಂಗಳ ಅಂತ್ಯದ ಒಳಗೆ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕವಾಗಿದ್ದು, ಸಿನಿಯಾರಿಟಿ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ.  ಬಿಬಿಎಂಪಿಯಲ್ಲಿ ಸುಮಾರು 15 ಸಾವಿರ ಹೊರಗುತ್ತಿಗೆ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ರು, ಅವರಿಗೆ ಬಿಬಿಎಂಪಿಯೇ ಡೈರೆಕ್ಟ್ ಫೇಮೆಂಟ್ ಸಿಸ್ಟಂ ಅಡಿಯಲ್ಲಿ ವೇತನ ಪಾವತಿ ಮಾಡುತ್ತಿತ್ತು. 2018ಕ್ಕು ಮೊದಲು ಗುತ್ತಿಗೆ ಆಧಾರದ ಮೇಲೆ ಕಾಂಟ್ರಾಕ್ಟ್ರಗಳ ಅಡಿಯಲ್ಲಿ ಪೌರಕಾರ್ಮಿಕರು ಕೆಲಸ ಮಾಡ್ತಿದ್ರು. ಈ ವೇಳೆ ಕೆಲಸ ಮಾಡುತ್ತಿದ್ದ ಪೌರಕಾರ್ಮಿಕರಿಗೆ ಸರಿಯಾಗಿ ಪಿಎಫ್, ಇ ಎಸ್ ಯ ಹಾಗು ಇತರೆ ಸೌಲಭ್ಯಗಳು ಸರಿಯಾಗಿ ಲಭ್ಯವಿರಲ್ಲ. ಈ ಹಿನ್ನಲೆ ಪೌರಕಾರ್ಮಿಕರು ಹಲವು ವರ್ಷಗಳಿಂದ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ರು. ಇದೀಗ ಸರ್ಕಾರ ಸಿನಿಯಾರಿಟಿ ಆಧಾರದ ಮೇಲೆ, ಕನಿಷ್ಠ ಎರಡು ವರ್ಷ ಕೆಲಸ ಮಾಡಿರಬೇಕು, ಗರಿಷ್ಠ 55 ವರ್ಷ ಮಿತಿಯನ್ನ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು.  ತಮ್ಮ ನಿಸ್ವಾರ್ಥ ಸೇವೆಯಿಂದ ನಗರವನ್ನ ಸ್ವಚ್ಚವಿಡುವ ಕೈಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿರುವುದು ಪೌರಕಾರ್ಮಿಕರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹಂತ ಹಂತವಾಗ ಅವಶ್ಯಕತೆಗೆ ತಕ್ಕಂತೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನ ಬಿಬಿಎಂಪಿ ಖಾಯಂಗೊಳಿಸಲಿದ್ಯಂತೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments