Webdunia - Bharat's app for daily news and videos

Install App

ಅದೇನ್ ಸಿಡಿ.. ಬಿಡುಗಡೆ ಮಾಡಿ ನೋಡೇ ಬಿಡೋಣ: ಬಿಜೆಪಿ

Webdunia
ಮಂಗಳವಾರ, 28 ಫೆಬ್ರವರಿ 2017 (16:20 IST)
ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಪರಸ್ಪರ ತಳ್ಳಾಟ, ನೂಕಾಟ ನಡೆಸಿದಾಗ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.
 
ಬಿಜೆಪಿಯವರ ಕರ್ಮಕಾಂಡವನ್ನು ಬಹಿರಂಗಗೊಳಿಸುತ್ತೇನೆ ಎಂದು ಕಾಂಗ್ರೆಸ್ ಸದಸ್ಯ ಜಿ.ಕೆ ವೆಂಕಟೇಶ್ ಸಿಡಿ ತೋರಿಸಿದಾಗ ಉದ್ರಿಕ್ತಗೊಂಡ ಬಿಜೆಪಿ ಸದಸ್ಯರು, ಸಿಡಿ ತೋರಿಸಿ ನೋಡಿಯೇ ಬಿಡೋಣ ಎಂದು ತಿರುಗೇಟು ನೀಡಿದರು.
 
ಬಿಜೆಪಿ ಸದಸ್ಯರು ಕೂಡಲೇ ಸಿಡಿ ಬಹಿರಂಗಗೊಳಿಸುವಂತೆ ಒತ್ತಡ ಹೇರಿದಾಗ ಕಾಂಗ್ರೆಸ್ ಸದಸ್ಯರು ಕೂಡಾ ತೀವ್ರ ಪ್ರತಿರೋಧ ವ್ಯಕ್ತಪಡಿಸಿದಾಗ ಕೋಲಾಹಲ ಸೃಷ್ಟಿಸಿದೆ.
 
ಮಾಜಿ ಮೇಯರ್ ಮಂಜುನಾಥ್ ಮಾತನಾಡಿ, ಬಿಜೆಪಿ ಸದಸ್ಯರ ಗುಂಡಾ ವರ್ತನೆ ವಿಷಾದಕರ ಸಂಗತಿ. ಯಾವ ಕಾರಣದಿಂದ ಬಿಜೆಪಿ ಗದ್ದಲ ಸೃಷ್ಟಿಸಲು ಬಯಸುತ್ತದೆ ಎನ್ನುವುದು ತಿಳಿದಿಲ್ಲ. ಮೇಯರ್ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ವೆಂಕಟೇಶ್, ನಿಮ್ಮ ನಾಯಕ ಯಡಿಯೂರಪ್ಪನ ಸಿಡಿ ಬಹಿರಂಗವಾಗಿದೆ. ಇದೀಗ ನಿಮ್ಮ ಕರ್ಮಕಾಂಡದ ಸಿಡಿ ಬಹಿರಂಗಗೊಳಿಸುತ್ತೇನೆ ಎಂದು ಹೇಳಿದ್ದರಿಂದ ಉದ್ರಿಕ್ತಗೊಂಡ ಬಿಜೆಪಿ ಸದಸ್ಯರು ಪ್ರತಿಭಟನೆ ತೋರಿದ್ದಾರೆ ಎಂದು ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments