Webdunia - Bharat's app for daily news and videos

Install App

ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಸಕಲ ಸಿದ್ಧತೆ

Webdunia
ಶುಕ್ರವಾರ, 26 ಆಗಸ್ಟ್ 2022 (19:22 IST)
ನಗರದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರೆ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಬಿಬಿಎಂಪಿ‌ ಸೂಚನೆ ನೀಡಲಾಗಿದೆ.ಇನ್ನು ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಲು ಹಾಗೂ ನುರಿತ ಈಜುಗಾರರಿರಬೇಕು. ಮುಂಜಾಗ್ರತಾ ಕ್ರಮವಾಗಿ SDRF ಹಾಗೂ Fire Department ಇಲಾಖೆಗೆ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲು ಕೂಡಲೇ ಪತ್ರ ಬರೆಯಬೇಕೆಂದಹ ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
 
ಗಣೇಶ ವಿಸರ್ಜನಾ ಸ್ಥಳದಲ್ಲಿ ಭದ್ರತಾ ಧೃಷ್ಟಿಯಿಂದ ಪಾಲಿಕೆ ಅಧಿಕಾರಿಗಳು,ಮಾರ್ಷಲ್ ಗಳ ನಿಯೋಜನೆ, ಬ್ಯಾರಿಕೇಡಿಂಗ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
 
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿಲು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳು ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಲುವಾಗಿ 421 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಮತ್ತು 37 ತಾತ್ಕಾಲಿಕ ಕಲ್ಯಾಣಿಗಳ ವ್ಯವಸ್ಥೆ ಬಿಬಿಎಂಪಿಯಿಂದ ಮಾಡಲಾಗಿರುತ್ತದೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments