ಬೆಂಗಳೂರು ಮಹಾನಗರ ಪಾಲಿಕೆ ಬಿಕ್ಕಟ್ಟು ಕುರಿತಂತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ಆರಂಭವಾಗಿದೆ.
ಬೆಂಗಳೂರಿನ ಯುಬಿ ಸಿಟಿ ಹತ್ತಿರದಲ್ಲಿರುವ ಜಮೀರ್ ಗೆಸ್ಟ್ ಹೌಸ್ನಲ್ಲಿ ಕುಮಾರಸ್ವಾಮಿ ಶಾಸಕಾಂಗ ಸಭೆ ಕರೆದಿದ್ದು, ಬಿಎಂಪಿ ಪಾಲಿಕೆಯಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಲ್ಲಿ ಸೂಕ್ತ ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಜೆಡಿಎಸ್ ಶಾಸಕಾಂಗದ ತೀರ್ಮಾನವನ್ನು ಪಕ್ಷದ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರಿಗೆ ತಿಳಿಸಲಾಗುತ್ತಿದ್ದು ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಸಭೆಯಲ್ಲಿ ಮಾಜಿ ಸಚಿವ ಬಂಡೆಪ್ಪಾ ಕಾಶೆಂಪೂರ್ ಸೇರಿದಂತೆ ಎಲ್ಲಾ ಜೆಡಿಎಸ್ ಶಾಸಕರು ಉಪಸ್ಥಿತರಿದ್ದಾರೆ ಎನ್ನಲಾಗಿದೆ.
ಕೇರಳದ ಕೊಚ್ಚಿಯ ಲಿ ಮ್ಯಾರಿಯೆಟ್ ಹೋಟೆಲ್ನಲ್ಲಿ ಜೆಡಿಎಸ್ 14 ಕಾರ್ಪೋರೇಟರ್ಗಳು ವಾಸ್ತವ್ಯ ಹೂಡಿದ್ದಾರೆ, ಅದೇ ಹೋಟೆಲ್ನಲ್ಲಿಯೇ ಪಕ್ಷೇತರ ಕಾರ್ಪೋರೇಟರ್ಗಳು ಕೂಡಾ ವಾಸ್ತವ್ಯ ಹೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.