ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ

Webdunia
ಗುರುವಾರ, 30 ಸೆಪ್ಟಂಬರ್ 2021 (21:26 IST)
ಬೆಂಗಳೂರು: ಬಿಬಿಎಂಪಿ ಕಂದಾಯ ಬಾಕಿ ಉಳಿಸಿಕೊಂಡ ಹಿನ್ನೆಲೆ ಪಶ್ಚಿಮ ವಲಯ ಅಧಿಕಾರಿಗಳು ಮಾಲ್ ಗೆ ಬೀಗ ಜಡಿದರು. ಎಚ್ಚತ್ತ ಮಾಲ್ ಮಾಲೀಕರು 5 ಕೋಟಿ ರೂ. ಕಂದಾಯ ಪಾವತಿಸಿದ್ದು, ತೆರೆಯಲು ಅವಕಾಶ ನೀಡಲಾಯಿತು.
ಮಂತ್ರಿ ಮಾಲ್ ಬರೋಬ್ಬರಿ 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಕೇವಲ 5 ಕೋಟಿ ರೂ. ಡಿಡಿ ಪಾವತಿ ಮಾಡಿದ ಕೂಡಲೇ ಬೀಗ ತೆರೆಯಲು ಅವಕಾಶ ಕೊಟ್ಟಿದೆ. ಬಿಬಿಎಂಪಿಯ ಈ ನಡೆ ಸಾರ್ವಜನಿಕರ ಟೀಕೆಗೆ ಒಳಗಾಗಿದೆ.
2017 ರಿಂದಲೂ ಮಂತ್ರಿ ಮಾಲ್ ತೆರಿಗೆ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದೆ. ಬಡ್ಡಿ ಹಣವೂ ಸೇರಿ 39 ಕೋಟಿ ರೂ ಬಾಕಿಯಾಗಿದೆ. ಹಲವು ಬಾರಿ ನೋಟಿಸ್​ ನೀಡಿದರೂ ಕ್ಯಾರೆ ಎನ್ನದ ಮಂತ್ರಿ ಮಾಲ್ ಆಡಳಿತ ವರ್ಗಕ್ಕೆ ಈ ಹಿಂದೆಯೂ ಬೀಗ ಹಾಕಿ ಬಿಸಿ ಮುಟ್ಟಿಸಲಾಗಿತ್ತು. ತೆರಿಗೆ ಕಟ್ಟುವುದಾಗಿ ಮುಚ್ಚಳಿಕೆ ಬರೆದುಕೊಟ್ಟ ಬಳಿಕ ತೆರೆಯಲು ಅನುಮತಿಸಿದ್ದರು‌. ಗುರುವಾರ ಮತ್ತೆ ತೆರಿಗೆ ಸಂಗ್ರಹ ಅಭಿಯಾನದ ಭಾಗವಾಗಿ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್​ಗೆ ಬೀಗ ಹಾಕಿ, ಸ್ವಲ್ಪ ತೆರಿಗೆ ಪಾವತಿಸಿದ ಬಳಿಕ ತೆರೆಯಲು ಅವಕಾಶ ಕೊಟ್ಟರು.
Photo Courtesy: Google

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಎಷ್ಟು ರೂಪಾಯಿ ಸಿಗುತ್ತದೆ

CET ಪರೀಕ್ಷೆ ದಿನಾಂಕ ಘೋಷಣೆ, ಯಾವಾಗ ಅರ್ಜಿ ಸಲ್ಲಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ನಾವು ಬಿಜೆಪಿ ರಿಮೋಟ್ ಕಂಟ್ರೋಲ್ ಅಲ್ಲ: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಗ್ಯಾರಂಟಿಯಿಂದ ಯಾವುದಕ್ಕೂ ದುಡ್ಡಿಲ್ಲ, ನಾನಿನ್ನೂ ಬದುಕಿದ್ದೀನಿ, ಹೋರಾಟ ಮಾಡ್ತೀನಿ: ದೇವೇಗೌಡ

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments