Webdunia - Bharat's app for daily news and videos

Install App

ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ

Webdunia
ಗುರುವಾರ, 30 ಸೆಪ್ಟಂಬರ್ 2021 (21:26 IST)
ಬೆಂಗಳೂರು: ಬಿಬಿಎಂಪಿ ಕಂದಾಯ ಬಾಕಿ ಉಳಿಸಿಕೊಂಡ ಹಿನ್ನೆಲೆ ಪಶ್ಚಿಮ ವಲಯ ಅಧಿಕಾರಿಗಳು ಮಾಲ್ ಗೆ ಬೀಗ ಜಡಿದರು. ಎಚ್ಚತ್ತ ಮಾಲ್ ಮಾಲೀಕರು 5 ಕೋಟಿ ರೂ. ಕಂದಾಯ ಪಾವತಿಸಿದ್ದು, ತೆರೆಯಲು ಅವಕಾಶ ನೀಡಲಾಯಿತು.
ಮಂತ್ರಿ ಮಾಲ್ ಬರೋಬ್ಬರಿ 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಕೇವಲ 5 ಕೋಟಿ ರೂ. ಡಿಡಿ ಪಾವತಿ ಮಾಡಿದ ಕೂಡಲೇ ಬೀಗ ತೆರೆಯಲು ಅವಕಾಶ ಕೊಟ್ಟಿದೆ. ಬಿಬಿಎಂಪಿಯ ಈ ನಡೆ ಸಾರ್ವಜನಿಕರ ಟೀಕೆಗೆ ಒಳಗಾಗಿದೆ.
2017 ರಿಂದಲೂ ಮಂತ್ರಿ ಮಾಲ್ ತೆರಿಗೆ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದೆ. ಬಡ್ಡಿ ಹಣವೂ ಸೇರಿ 39 ಕೋಟಿ ರೂ ಬಾಕಿಯಾಗಿದೆ. ಹಲವು ಬಾರಿ ನೋಟಿಸ್​ ನೀಡಿದರೂ ಕ್ಯಾರೆ ಎನ್ನದ ಮಂತ್ರಿ ಮಾಲ್ ಆಡಳಿತ ವರ್ಗಕ್ಕೆ ಈ ಹಿಂದೆಯೂ ಬೀಗ ಹಾಕಿ ಬಿಸಿ ಮುಟ್ಟಿಸಲಾಗಿತ್ತು. ತೆರಿಗೆ ಕಟ್ಟುವುದಾಗಿ ಮುಚ್ಚಳಿಕೆ ಬರೆದುಕೊಟ್ಟ ಬಳಿಕ ತೆರೆಯಲು ಅನುಮತಿಸಿದ್ದರು‌. ಗುರುವಾರ ಮತ್ತೆ ತೆರಿಗೆ ಸಂಗ್ರಹ ಅಭಿಯಾನದ ಭಾಗವಾಗಿ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್​ಗೆ ಬೀಗ ಹಾಕಿ, ಸ್ವಲ್ಪ ತೆರಿಗೆ ಪಾವತಿಸಿದ ಬಳಿಕ ತೆರೆಯಲು ಅವಕಾಶ ಕೊಟ್ಟರು.
Photo Courtesy: Google

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments