ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ

Webdunia
ಗುರುವಾರ, 30 ಸೆಪ್ಟಂಬರ್ 2021 (21:26 IST)
ಬೆಂಗಳೂರು: ಬಿಬಿಎಂಪಿ ಕಂದಾಯ ಬಾಕಿ ಉಳಿಸಿಕೊಂಡ ಹಿನ್ನೆಲೆ ಪಶ್ಚಿಮ ವಲಯ ಅಧಿಕಾರಿಗಳು ಮಾಲ್ ಗೆ ಬೀಗ ಜಡಿದರು. ಎಚ್ಚತ್ತ ಮಾಲ್ ಮಾಲೀಕರು 5 ಕೋಟಿ ರೂ. ಕಂದಾಯ ಪಾವತಿಸಿದ್ದು, ತೆರೆಯಲು ಅವಕಾಶ ನೀಡಲಾಯಿತು.
ಮಂತ್ರಿ ಮಾಲ್ ಬರೋಬ್ಬರಿ 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಕೇವಲ 5 ಕೋಟಿ ರೂ. ಡಿಡಿ ಪಾವತಿ ಮಾಡಿದ ಕೂಡಲೇ ಬೀಗ ತೆರೆಯಲು ಅವಕಾಶ ಕೊಟ್ಟಿದೆ. ಬಿಬಿಎಂಪಿಯ ಈ ನಡೆ ಸಾರ್ವಜನಿಕರ ಟೀಕೆಗೆ ಒಳಗಾಗಿದೆ.
2017 ರಿಂದಲೂ ಮಂತ್ರಿ ಮಾಲ್ ತೆರಿಗೆ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದೆ. ಬಡ್ಡಿ ಹಣವೂ ಸೇರಿ 39 ಕೋಟಿ ರೂ ಬಾಕಿಯಾಗಿದೆ. ಹಲವು ಬಾರಿ ನೋಟಿಸ್​ ನೀಡಿದರೂ ಕ್ಯಾರೆ ಎನ್ನದ ಮಂತ್ರಿ ಮಾಲ್ ಆಡಳಿತ ವರ್ಗಕ್ಕೆ ಈ ಹಿಂದೆಯೂ ಬೀಗ ಹಾಕಿ ಬಿಸಿ ಮುಟ್ಟಿಸಲಾಗಿತ್ತು. ತೆರಿಗೆ ಕಟ್ಟುವುದಾಗಿ ಮುಚ್ಚಳಿಕೆ ಬರೆದುಕೊಟ್ಟ ಬಳಿಕ ತೆರೆಯಲು ಅನುಮತಿಸಿದ್ದರು‌. ಗುರುವಾರ ಮತ್ತೆ ತೆರಿಗೆ ಸಂಗ್ರಹ ಅಭಿಯಾನದ ಭಾಗವಾಗಿ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್​ಗೆ ಬೀಗ ಹಾಕಿ, ಸ್ವಲ್ಪ ತೆರಿಗೆ ಪಾವತಿಸಿದ ಬಳಿಕ ತೆರೆಯಲು ಅವಕಾಶ ಕೊಟ್ಟರು.
Photo Courtesy: Google

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments