Select Your Language

Notifications

webdunia
webdunia
webdunia
webdunia

ಅಕ್ರಮ ಒತ್ತುವರಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಬಿಬಿಎಂಪಿ ಆಯುಕ್ತ

ಅಕ್ರಮ ಒತ್ತುವರಿ
ಬೆಂಗಳೂರು , ಶನಿವಾರ, 6 ಆಗಸ್ಟ್ 2016 (14:50 IST)
ಬಿಬಿಎಂಪಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಅಕ್ರಮ ಒತ್ತುವರಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶದ ಮೇರೆಗೆ ಬಿಬಿಎಂಪಿ ಇಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದೆ.
 
ಬಿಲ್ಡರ್‌ಗಳೊಂದಿಗೆ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿರುವುದರಿಂದ ನಗರದಲ್ಲಿ ಇಷ್ಟೊಂದು ಸಮಸ್ಯೆಯಾಗಿದೆ. ಒತ್ತುವರಿಯಲ್ಲಿ ಬಾಗಿಯಾಗಿರುವ ಅಧಿಕಾರಿಗಳ ವಿರುದ್ಧವು ಕಠಿಣ ಕ್ರಮ ಜರುಗಿಸಲಾಗುತ್ತದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.
 
ಸಾರ್ವಜನಿಕ ಆಸ್ತಿಪಾಸ್ತಿಯನ್ನು ಒತ್ತುವರಿ ಮಾಡಿಕೊಳ್ಳುವುದು ಕಾನೂನು ಬಾಹಿರ. ಅಂತವರ ವಿರುದ್ಧ ಕ್ರಮ ಕೈಗೊಳ್ಳಲೇ ಬೇಕು. ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಿಯೇ ತಿರುತ್ತೇನೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್‌ನ್ನು ಭಾರತದ ಮಾದರಿ ರಾಜ್ಯವಾಗಿಸುತ್ತೇವೆ: ಸಿಎಂ ವಿಜಯ್ ರೂಪಾನಿ