Select Your Language

Notifications

webdunia
webdunia
webdunia
webdunia

ಯಾರೇ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದರು ತೆರವು: ಸಿಎಂ ಸಿದ್ದರಾಮಯ್ಯ

ರಾಜಕಾಲುವೆ ಒತ್ತುವರಿ
ಬೆಂಗಳೂರು , ಸೋಮವಾರ, 8 ಆಗಸ್ಟ್ 2016 (11:11 IST)
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಯಾರೇ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದರು ತೆರವುಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ವಿಚಾರದಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ಈ ವಿಚಾರದಲ್ಲಿ ಸಾರ್ವಜನಿಕರು ತಪ್ಪು ಮಾಡಿಲ್ಲವೆ? ರಾಜಕಾಲುವೆ ಮೇಲೆ ಮನೆ ನಿರ್ಮಾಣ ಮಾಡಿಕೊಂಡರೆ ಸುಮ್ಮನಿರಬೇಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಎಷ್ಟೇ ಪ್ರಭಾವಿ ವ್ಯಕ್ತಿಗಳಿರಲಿ ಅಥವಾ ಪ್ರಭಾವಿ ಬಿಲ್ಡರ್ಸ್‌ಗಳಿರಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದರೆ ತೆರವುಗೊಳಿಸುವುದು ಖಚಿತ. ಈ ಕುರಿತು ಸಾರ್ವಜನಿಕರು ನೀಡಿರುವ ದೂರಿನ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
 
ಇಂತಹ ವಿಚಾರದಲ್ಲಿ ಕೆಲವರಿಗೆ ತೊಂದರೆಯಾಗುತ್ತದೆ. ಆದರೆ, ಬೆಂಗಳೂರಿನ ಸಮಸ್ಯೆ ನಿವಾರಿಸಲು ತೆರವು ಕಾರ್ಯಾಚರಣೆ ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ: ನಾಲ್ವರು ಶಂಕಿತರ ಬಂಧನ