Webdunia - Bharat's app for daily news and videos

Install App

ವೇತನ ಹೆಚ್ಚಳ ಬೇಡಿಕೆ ಬಿಬಿಎಂಪಿ

Webdunia
ಗುರುವಾರ, 10 ಮಾರ್ಚ್ 2022 (14:02 IST)
ವೇತನ ಹೆಚ್ಚಳ, ಆರೋಗ್ಯ ಕಾರ್ಡ್, ಗರ್ಭಿಣಿಯರಿಗೆ ಆರು ತಿಂಗಳ ರಜೆ ಸೇರಿದಂತೆ ವಿವಿಧ ಬೇಡಿಕೆಗೆ ಒತ್ತಾಯಿಸಿದ್ದು, ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮಾಡುವುದಾಗಿ ನಿರ್ಧಾರ ಮಾಡಲಾಗಿದೆ.
ಬೆಂಗಳೂರು: ಬಿಬಿಎಂಪಿ (BBMP protest) ಪೌರ ಕಾರ್ಮಿಕರಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು
18,500 ಪೌರಕಾರ್ಮಿಕರು, ಮೇಲ್ವಿಚಾರಕರನ್ನು ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂಪಾರ್ಕ್‌ನಲ್ಲಿ ಬಿಬಿಎಂಪಿಯ ಸಾವಿರಾರು ಪೌರಕಾರ್ಮಿಕರಿಂದ ಪ್ರತಿಭಟನೆ ಮಾಡಿದ್ದಾರೆ. 198 ವಾರ್ಡ್‌ಗಳಲ್ಲಿ ಕೆಲಸಕ್ಕೆ ಗೈರಾಗಿ ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವೇತನ ಹೆಚ್ಚಳ, ಆರೋಗ್ಯ ಕಾರ್ಡ್, ಗರ್ಭಿಣಿಯರಿಗೆ ಆರು ತಿಂಗಳ ರಜೆ ಸೇರಿದಂತೆ ವಿವಿಧ ಬೇಡಿಕೆಗೆ ಒತ್ತಾಯಿಸಿದ್ದು, ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮಾಡುವುದಾಗಿ ನಿರ್ಧಾರ ಮಾಡಲಾಗಿದೆ. ಸ್ಥಳಕ್ಕೆ ಬಿಬಿಎಂಪಿ ಕಮಿಷಿನರ್ ಗೌರವ್ ಗುಪ್ತ ಬರುವಂತೆ ಆಗ್ರಹಿಸಿದ್ದಾರೆ.
 
ವಿಧಾನಪರಿಷತ್: ಕರ್ನಾಟಕದಲ್ಲಿ ಬಾಲ್ಯವಿವಾಹ ಹೆಚ್ಚಾಗಿದೆ. ಶೇಕಡಾ 66 ರಷ್ಟು ಹೆಚ್ಚಾಗಿದೆ ಎಂದು ಎನ್‌.ಸಿ.ಆರ್‌.ಬಿ ಹೇಳಿದೆ. 2020ನೇ ಸಾಲಿನಲ್ಲಿ 180 ಪ್ರಕರಣ ದಾಖಲಾಗಿತ್ತು. ಬಾಲ್ಯ ವಿವಾಹ ತಡೆಯಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಕಠಿಣ ಕಾನೂನು ರೂಪಿಸಬೇಕು ಎಂದು ಶೂನ್ಯವೇಳೆಯಲ್ಲಿ ಎಸ್.ವಿ.ಸಂಕನೂರು ಪ್ರಸ್ತಾಪಿಸಿದ್ದಾರೆ. ಮೈಸೂರು ಜಿಲ್ಲೆ ಹನೂರು ತಾಲೂಕಿನ ಕೆರೆದಿಂಬ ಸೋಲಿಗರ ಹಾಡಿ ಇದೆ. ಅಲ್ಲಿ ರಸ್ತೆ ಮತ್ತು ಚಿಕಿತ್ಸೆಗೆ ಸೌಲಭ್ಯ ಇಲ್ಲ. ಜನರು ಆಸ್ಪತ್ರೆ ತಲುಪಲು ಒದ್ದಾಡುತ್ತಿದ್ದಾರೆ. ಗರ್ಭಿಣಿ ಮಹಿಳೆಯನ್ನು ಕಿಲೋ ಮೀಟರ್​ ಗಟ್ಟಲೆ ಕಂಬಳಿಯಲ್ಲಿ ಹೊತ್ತು ಸಾಗಿದ್ದಾರೆ. ಬುಡಕಟ್ಟು ಹಾಡಿಗಳಲ್ಲಿ ರಸ್ತೆ ಹಾಗೂ ಮೂಲಭೂತ ಸೌಕರ್ಯ ಇಲ್ಲ. ಇದನ್ನು ಸರ್ಕಾರ ಸರಿಪಡಿಸಬೇಕು ಎಂದು ವಿಧಾನಪರಿಷತ್​ನ ಶೂನ್ಯ ವೇಳೆಯಲ್ಲಿ ಶಾಂತಾರಾಂ ಸಿದ್ದಿ ಪ್ರಸ್ತಾಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೆಳೆಯ ಮೋದಿಗಾಗಿ ಕಾರಿನಲ್ಲೇ 10ನಿಮಿಷ ಕಾದು ಕುಳಿತ ರಷ್ಯಾ ಅಧ್ಯಜ್ಷ ಪುಟಿನ್

ಶೀಘ್ರದಲ್ಲೇ ಬಿಜೆಪಿ ವಿರುದ್ಧ ಹೈಡ್ರೋಜನ್ ಬಾಂಬ್ ಸಿಡಿಸುತ್ತೇವೆ: ರಾಹುಲ್ ಗಾಂಧಿ

ಧರ್ಮಸ್ಥಳ ಸೌಜನ್ಯ ಮನೆಗೆ ಭೇಟಿ ನೀಡಲು ಮುಂದಾದ ಬಿಜೆಪಿ ನಾಯಕರು

ಕೇರಳ ಯೂಟ್ಯೂಬರ್ ಶಾಜನ್ ಹತ್ಯೆಗೆ ಯತ್ನ, ಬೆಂಗಳೂರಿನಲ್ಲಿ ಆರೋಪಿಗಳು ಪೊಲೀಸ್‌ ವಶಕ್ಕೆ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments