Webdunia - Bharat's app for daily news and videos

Install App

ಬಿಬಿಎಂಪಿ ಗದ್ದುಗೆ ಕೈ ತಪ್ಪುವ ಭೀತಿ: ಅಶೋಕ್‌ಗೆ ಆರ್ಎಸ್ಎಸ್ ನಾಯಕರ ತರಾಟೆ

Webdunia
ಮಂಗಳವಾರ, 1 ಸೆಪ್ಟಂಬರ್ 2015 (14:34 IST)
ಬಿಬಿಎಂಪಿ ಚುನಾವಣೆಯಲ್ಲಿ 100 ವಾರ್ಡ್‌ಗಳನ್ನು ತಮ್ಮ ತೆಕ್ಕೆಗೆ ಬರುವಂತೆ ಮಾಡಿ ಪ್ರಶಂಸೆಗೊಳಗಾಗಿದ್ದ ಬಿಬಿಎಂಪಿಯ ಬಿಜೆಪಿ ಚುನಾವಣಾ ಉಸ್ತುವಾರಿ, ಬಿಜೆಪಿ ಶಾಸಕ ಆರ್.ಅಶೋಕ್ ಅವರು ಪ್ರಸ್ತುತ ಪೇಚಿಗೆ ಸಿಲುಕಿದ್ದು, ವಿಲಿವಿಲಿ ಒದ್ದಾಡುವಂತಾಗಿದೆ.  
 
ಹೌದು, ಚುನಾವಣೆ ಬಳಿಕ ಗದ್ದುಗೆ ಏರುವುದು ಖಚಿತ ಎಂದು ಬೀಗುತ್ತಿದ್ದ ಬಿಜೆಪಿಯ ಅಭ್ಬರ ಪ್ರಸ್ತುತ ತುಸು ತಣ್ಣಗಾಗಿದ್ದು, ಅಧಿಕಾರದ ಗದ್ದುಗೆಗಾಗಿ ಪರದಾಡುತ್ತಿದೆ. ಫಲಿತಾಂಶದ ಬಳಿಕ 8 ಮಂದಿ ಪಕ್ಷೇತರರು ಬೆಂಬಲ ನೀಡಲು ಸಜ್ಜಾಗಿದ್ದರೂ ಕೂಡ ನಾಯಕ ಅಶೋಕ್ ಅವರ ಕಡೆಗಣನೆಯಿಂದ ಪ್ರಸ್ತುತ ಪಕ್ಷೇತರ ಕಾರ್ಪೊರೇಟರ್‌ಗಳು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. 
 
ಈ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ನಾಯಕರು ಅಶೋಕ್ ವಿರುದ್ಧ ದೂರವಾಣಿ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಮನೆ ಬಾಗಿಲಿಗೆ ಬಂದವರನ್ನು ಕಡೆಗಣಿಸಿದ್ದೀರಿ. ಇದರಿಂದ ಈ ಪರಿಸ್ಥಿತಿ ಬಂದೊದಗಿದೆ. ಅವರನ್ನು ಮನವೊಲಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ, ಮೇಯರ್ ಆಯ್ಕೆಯಲ್ಲಿ ಜೆಡಿಎಸ್ ಆಟವಾಡುತ್ತಿದೆ. ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments