Select Your Language

Notifications

webdunia
webdunia
webdunia
webdunia

ರಂಗೇರಿದ ಬಿಬಿಎಂಪಿ ಚುನಾವಣೆ

ರಂಗೇರಿದ ಬಿಬಿಎಂಪಿ ಚುನಾವಣೆ
ಬೆಂಗಳೂರು , ಸೋಮವಾರ, 25 ಅಕ್ಟೋಬರ್ 2021 (19:19 IST)
ಬಿಬಿಎಂಪಿ ಚುನಾವಣೆಗೆ ಸಂಬಂಸಿದಂತೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದರೆ ಚುನಾವಣೆಗೆ ಪಾಲಿಕೆ ಸಿದ್ಧವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಿರ್ಧಾರ ಸುಪ್ರೀಂ ಕೈಯಲ್ಲಿದೆ. ಒಂದು ವೇಳೆ ಹಸಿರು ನಿಶಾನೆ ತೋರಿದರೆ, ಬಿಬಿಎಂಪಿಯ 243 ವಾರ್ಡ್ ಅಥವಾ 198 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸರ್ಕಾರಕ್ಕೆ ವರದಿ ನೀಡಲಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ.
 
ಕರಡು ಪ್ರತಿ ಸಿದ್ಧವಾಗಿವೆ. ಈ ವಿಚಾರವಾಗಿ ಸಾಕಷ್ಟು ಪ್ರಶ್ನೆಗಳನ್ನು ನಾವು ಚುನಾವಣಾ ಆಯೋಗಕ್ಕೆ ಕೇಳಿದ್ದೇವೆ. 243 ವಾರ್ಡ್‍ಗಳ ವಿಂಗಡಣೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸಿದ್ಧತೆಗಳು ಪೂರ್ಣಗೊಂಡ ನಂತರ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಆಯೋಗದ ಸೂಚನೆ ಮೇರೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿನ ಮಳಿಗೆಗಳಿಗೆ ರಿಯಾತಿ..!!!