Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮೈತ್ರಿ: ಕಾಂಗ್ರೆಸ್‌ನಿಂದ ಕುತಂತ್ರ ರಾಜಕಾರಣ ಎಂದ ಸಚಿವ ಅನಂತ್ ಕುಮಾರ್

ಬಿಬಿಎಂಪಿ ಮೈತ್ರಿ: ಕಾಂಗ್ರೆಸ್‌ನಿಂದ ಕುತಂತ್ರ ರಾಜಕಾರಣ ಎಂದ ಸಚಿವ ಅನಂತ್ ಕುಮಾರ್
ಬೆಂಗಳೂರು , ಶನಿವಾರ, 29 ಆಗಸ್ಟ್ 2015 (16:27 IST)
ಬೆಂಗಳೂರಿನ ಮತದಾರರು ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದರೂ ಕಾಂಗ್ರೆಸ್ ಪಕ್ಷ ಕುತಂತ್ರ ರಾಜಕಾರಣ ನಡೆಸಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಏರಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಪಕ್ಷ ಜೆಡಿಎಸ್‌ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಜನಾದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
 
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ಚುನಾವಣೆ ಆಯೋಗ ಕೂಡಲೇ ಮೇಯರ್ ಮತ್ತು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
 
ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಜೆ.ಎಚ್.ಪಟೇಲ್, ನಜೀರ್ ಸಾಬ್‌ರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುತ್ಸದ್ಧಿಯಲ್ಲ. ಜನತೆಯ ತೀರ್ಪಿನ ವಿರುದ್ಧವಾಗಿ ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರ ಪಡೆಯಲು ಹವಣಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಇನಂತ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada