ಘಟನೆ ಗೆ ಬಿಬಿಎಂಪಿ ನಿರ್ಲಕ್ಷ್ಯ ಬೆಳಕಿಗೆ..!

Webdunia
ಬುಧವಾರ, 7 ಜೂನ್ 2023 (17:04 IST)
ಮಹಾಮಳೆಗೆ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಸಿಲುಕಿ   ಯುವತಿ ಸಾವು ಪ್ರಕರಣ  ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು,ಇಂದು ಲೋಕಾಯುಕ್ತ ಐಜಿಪಿ ಘಟನಾ ಸ್ಥಳಕ್ಕೆ ಭೇಟಿ‌ ನೀಡಿದ್ರು.  ಘಟನ ಸ್ಥಳಕ್ಕೆ ಘಟನೆಗೆ ಕಾರಣವೇನು. ಏನೆಲ್ಲ ಸಮಸ್ಯೆಗಳಿಂದ ಅವಘಡ ಸಂಭವಿಸಿತು. ಏನೆಲ್ಲಾ ಲೋಪವಿತ್ತು. ಸಂಬಂಧಿಸಿದ ಅಧಿಕಾರಿಗಳು ಯಾರು ಎಂಬ ಮಾಹಿತಿ ಕಲೆ ಹಾಕಿದ್ರು .ಮೇ. 21ರಂದು ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆ.ಆರ್. ಸರ್ಕಲ್ ನಲ್ಲಿ ಖಾಸಗಿ ಕಂಪನಿ ಉದ್ಯೋಗಿ ಭಾನು ರೇಖಾ ಎಂಬಾಕೆ ಮಳೆ ನೀರಿನಲ್ಲಿ‌ ಮುಳುಗಿ ಸಾವನ್ನಪ್ಪಿದ್ಲು. ಆ ಘಟನೆಗೆ ಸಂಬಂಧಿಸಿದಂತೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದ ರಾಜ್ಯ ಲೋಕಾಯುಕ್ತ 15 ದಿನಗಳಲ್ಲಿ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು. ಆ ಹಿನ್ನೆಲೆ ಇಂದು ಲೋಕಾಯುಕ್ತ ಐಜಿಪಿ ಸುಬ್ರಮಣ್ಯೇಶ್ವರ ರಾವ್ ನೇತೃತ್ವದಲ್ಲಿ ತನಿಖಾ ತಂಡ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ರು.

ಲೋಕಾಯುಕ್ತ ಪೊಲೀಸ್ ವಿಂಗ್ ನ ತನಿಖಾಧಿಕಾರಿಗಳೊಂದಿಗೆ ಅಂಡರ್ ಪಾಸ್ ಗೆ ಭೇಟಿ ನೀಡಿದ ಲೋಕಾಯುಕ್ತ ಐಜಿಪಿ ಸುಬ್ರಮಣ್ಯೇಶ್ವರ ರಾವ್ ಅಂಡರ್ ಪಾಸ್ ನಿರ್ವಹಣೆ ಸಂಬಂಧಿಸಿದಂತೆ ಸ್ಥಳದಲ್ಲಿ ಹಾಜರಿದ್ದ ಇಂಜಿನಿಯರ್ ಗಳಿಂದ ಮಾಹಿತಿ ಪಡೆದಿದ್ದಾರೆ. ಅಂಡರ್ ಪಾಸ್ ನಿಂದ ಡ್ರೈನೇಜ್ ಸೇರುವ ಮಳೆ ನೀರು ದುರಂತ ನಡೆದ ದಿನ ಯಾಕೆ ಸರಾಗವಾಗಿ ಹೊರ ಹೋಗಿಲ್ಲ. ಅಲ್ಲಿ ಯಾವ ನೂನ್ಯತೆಗಳಿದ್ವು. ಅದು ಯಾವ ಅಧಿಕಾರಿಗಳು ವ್ಯಾಪ್ತಿಗೆ ಬರುತ್ತೆ. ಅವ್ರು ಅಂಡರ್ ಪಾಸ್ ನಿರ್ವಹಣೆಯಲ್ಲಿ ಯಾವ ಅಧಿಕಾರಿಯ ಕರ್ತವ್ಯ ಲೋಪವಿದೆ ಎಂಬುದರ ಬಗ್ಗೆ ಸಂಬಂಧಿಸಿದ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments