Webdunia - Bharat's app for daily news and videos

Install App

ಬಿಬಿಎಂಪಿ ಅವ್ಯವಹಾರಗಳ ತನಿಖೆಗೆ ಸರಕಾರ ಸದಾ ಸಿದ್ದ: ರೆಡ್ಡಿ

Webdunia
ಶುಕ್ರವಾರ, 24 ಏಪ್ರಿಲ್ 2015 (20:43 IST)
ಬೆಂಗಳೂರು: ವಿಧಾನಪರಿಷತ್ತು: ಈಗಿನ ಬಿಬಿಎಂಪಿ ಬೆಂಗಳೂರು ಮಹಾನಗರ ಪಾಲಿಕೆ ಆಗಿದ್ದಾಗ 2001ರಿಂದ 2006ರ ಅವಧಿಯಲ್ಲಿ ರಸ್ತೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ 18 ಸಾವಿರ ಕೋಟಿ ರೂ. ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

 ಬಿಬಿಎಂಪಿ ವಿಭಜನೆಗೆ ಸಂಬಂಧಿಸಿದ "ಕರ್ನಾಟಕ ನಗರಪಾಲಿಕೆಗಳ ತಿದ್ದುಪಡಿ ವಿಧೇಯಕ'ದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ವಿ. ಸೋಮಣ್ಣ ಅವರು ಪಾಲಿಕೆಯಲ್ಲಿ ಅವ್ಯವಹಾರ ನಡೆಯುತ್ತಿರುವುದು ಬಿಬಿಎಂಪಿ ಆದ ಮೇಲಷ್ಟೆ ಅಲ್ಲ. ಬಹಳ ಹಿಂದಿನಿಂದಲೂ ಸಾಕಷ್ಟು ಅವ್ಯವಹಾರಗಳು ನಡೆದಿವೆ ಎನ್ನುತ್ತಾ 2001 ರಿಂದ 2006ರ ಅವಧಿಯಲ್ಲಿ ರಸ್ತೆ ಕಾಮಗಾರಿಗಳಲ್ಲಿ ನಡೆದ 18 ಸಾವಿರ ಕೋಟಿ ರೂ. ಅವ್ಯವಹಾರವನ್ನು ಉಲ್ಲೇಖೀಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ರಾಮಲಿಂಗಾರೆಡ್ಡಿ, ಸೋಮಣ್ಣನವರಿಗೆ ಮಾಹಿತಿ ಕೊರತೆ ಇರಬಹುದು. 2001 ರಿಂದ 2006ರ ಅವಧಿಯಲ್ಲಿ ಪಾಲಿಕೆಯ ಒಟ್ಟು ಬಜೆಟ್‌ ಗಾತ್ರವೇ 1 ಸಾವಿರ ಕೋಟಿ ರೂ. ಇರುತ್ತಿತ್ತು. ಹೀಗಿರುವಾಗ 18 ಸಾವಿರ ಕೋಟಿ ರೂ. ಅವ್ಯವಹಾರ ನಡೆಯಲು ಹೇಗೆ ಸಾಧ್ಯ? ಒಂದು ವೇಳೆ ಅವ್ಯವಹಾರ ನಡೆದಿದ್ದರೂ ಅವರ ಸರ್ಕಾರವೇ ಅಧಿಕಾರದಲ್ಲಿತ್ತು. ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಅವ್ಯವಹಾರ ನಡೆದಿರುವ ಬಗ್ಗೆ ನಿಖರ ದಾಖಲೆಗಳಿದ್ದರೆ ಕೊಡಿ, ನಮ್ಮ ಸರ್ಕಾರ ಖಂಡಿತವಾಗಿ ಕ್ರಮ ಕೈಗೊಳ್ಳುತ್ತದೆ ಎಂದು ಸವಾಲು ಹಾಕಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments