Webdunia - Bharat's app for daily news and videos

Install App

ಕುಸಿಯುವ ಭೀತಿಯಲ್ಲಿ ಬಿಬಿಎಂಪಿ ಶಾಲೆಗಳು

Webdunia
ಬುಧವಾರ, 13 ಡಿಸೆಂಬರ್ 2023 (14:40 IST)
ಬಿಬಿಎಂಪಿಯ 19 ಶಾಲಾ ಕಟ್ಟಡಗಳಲ್ಲಿ ಆತಂಕದ ಛಾಯೆ ಆವರಿಸಿದೆ.ಅನಾಹುತಕ್ಕೆ ಶಿಥಿಲಾವಸ್ಥಿಯಲ್ಲಿರು ಶಾಲಾ ಕಟ್ಟಡಗಳು ಬಾಯಿತೆರೆದು ಕುಳಿತ್ತಿದೆ.ಶಿಥಿಲವಾಸ್ಥಿಯಲ್ಲಿರುವ ಕಟ್ಟಡಗಳ ಬಗ್ಗೆ ಇಂಜಿನಿಯರಿಂಗ್ ವಿಭಾಗದಿಂದ ಆಡಿಟ್ ರಿಪೋರ್ಟ್ ಸಲ್ಲಿಸಲಾಗಿದೆ. ಬಿಬಿಎಂಪಿಯ ಒಟ್ಟು 163 ಶಾಲೆಗಳ ಫೈಕಿ 19 ಶಾಲೆಗಳ ತೆರವಿಗೆ ಸಮಿತಿ ಶಿಫಾರಸ್ಸು ಮಾಡಲಾಗಿದೆ.
 
67 ಶಾಲೆಗಳ ದುರಸ್ಥಿಗೂ ಕಮಿಟಿಯಿಂದ ಶಿಫಾರಸು ಮಾಡಲಾಗಿದೆ.ಬಿಬಿಎಂಪಿ ನಿರ್ವಾಹಣೆಯಲ್ಲಿರುವ 167 ಶಾಲೆಗಳ ಪೈಕೆ 73 ಶಾಲೆಗಳಷ್ಟೆ ಸೇಫ್ ಆಗಿದೆ.ಉಳಿದ 94 ಶಾಲಾ ಕಟ್ಟಡಗಳಲ್ಲಿ 67 ಶಾಲಾ ಕಟ್ಟಡಗಳನ್ನು ದುರಸ್ಥಿಗೊಳಿಸಲು, ಹಾಗೂ 19 ಶಾಲೆಗಳನ್ನು ಕೆಡವಿ ಮರು ನಿರ್ಮಾಣ ಮಾಡಲು ಇಂಜಿನಿಯರಿಂಗ್ ವಿಭಾಗದಿಂದ ಬಿಬಿಎಂಪಿಗೆ ಶಿಫಾರಸು ಮಾಡಲಾಗಿದೆ.ಪೂರ್ವ ವಲಯದ 12, ಪಶ್ಚಿಮ ವಲಯದ 06, ದಕ್ಷಿಣ ವಲಯದ 01 ಶಾಲೆಗಳು ಶಿಥಿಲಾವಸ್ಥಿಯಲ್ಲಿ ಇದೆ.ಶಿವಾಜಿ ನಗರ ನರ್ಸರಿ ಶಾಲೆ ಕಟ್ಟಡ ಕುಸಿದ ಪ್ರಕರಣದ ನಂತರ ಟೆಕ್ನಲ್ ಕಮಿಟಿಗೆ ರಿಪೋರ್ಟ್ ಕಮಿಷನರ್  ಕೇಳಿದ್ದಾರೆ.
 
ಯಾವ್ಯಾವ ವಲಯದ ಶಾಲಾ ಕಟ್ಟಡಗಳಲ್ಲಿ ಆಂತಕ ? - ಇಲ್ಲಿದೆ ಡಿಟೈಲ್ಸ್
 
ವಲಯ - ದುರಸ್ಥಿ - ಮರು ನಿರ್ಮಾಣ 
 
ಪೂರ್ವ -     24 ‌   -   12
ಪಶ್ಚಿಮ -      32  -    06
ದಕ್ಷಿಣ-         08  -    01
ಮಹಾದೇವ ಪುರ- 01 -  00
RRನಗರ -             01-  00
ಬೊಮ್ಮನಹಳ್ಳಿ-      01-  00
 
ಬಿಬಿಎಂಪಿ ನಿರ್ವಾಹಣೆಯಲ್ಲಿರುವ ಎಲ್ಲ ಶಾಲೆ ಹಾಗೂ ಆಸ್ಪತ್ರೆ ಕಟ್ಟಡಗಳ ಸುರಕ್ಷಿತಗೆ ರಿಪೋರ್ಟ್ ಕೇಳಿದ್ವಿ .ಇಂಜಿನಿಯರಿಂಗ್ ವಿಭಾಗದಿಂದ ತಾಂತ್ರಿಕವಾಗಿ ಕಟ್ಟಡಗಳ ಕ್ವಾಲಿಟಿ ಚಕ್ ಮಾಡಲಾಗಿದೆ .167 ಶಾಲೆಗಳ ಪೈಕಿ 19 ಶಾಲೆಯ ಕಟ್ಟಡಗಳು ಹಳೆಯದಾಗಿದ್ದು ಹೊಸ ಕಟ್ಟಡಗಳ ನಿರ್ಮಾಣಕ್ಕೆ ಟೆಕ್ನಿಕಲ್ ಕಮಿಟಿ ಶಿಫಾರಸ್ಸು ಮಾಡಿದೆ .

ಕೆಲವು ಶಾಲೆಗಳಲ್ಲಿ‌ ಸಣ್ಣ ಪುಟ್ಟ ದುರಸ್ಥಿ ಕೆಲಸಗಳಿವೆ ಹಾಗೂ ಮೂರು ಆಸ್ಪತ್ರೆಗಳನ್ನು ಸಹ ಮರು ನಿರ್ಮಾಣ ಮಾಡಬೇಕಿದೆ.ತಕ್ಷಣವೇ ಹೊಸ ಕಟ್ಟಡಗಳ ನಿರ್ಮಾಣಕ್ಕೆ  ಕಾರ್ಯತಂತ್ರ ರೂಪಿಸಿ ಟೆಂಡರ್ ಕರೆಯಲಾಗುವುದು.ಉಳಿದಂತೆ ಬಿಬಿಎಂಪಿಗೆ ಸಂಬಂಧಿಸಿದ ಎಲ್ಲ ಕಟ್ಟಡಗಳ ಕ್ವಾಲಿಟಿ ಬಗ್ಗೆ ಸಹ ರಿಪೋರ್ಟ್ ಕೇಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments